Connect with us

Dvgsuddi Kannada | online news portal | Kannada news online

7.50 ಲಕ್ಷ ಬಿಲ್ ಮಂಜೂರಾತಿಗೆ ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದ ಕಲಬುರಗಿ ಮಹಾನಗರ ಪಾಲಿಕೆ‌ ಆಯುಕ್ತ

ಪ್ರಮುಖ ಸುದ್ದಿ

7.50 ಲಕ್ಷ ಬಿಲ್ ಮಂಜೂರಾತಿಗೆ ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದ ಕಲಬುರಗಿ ಮಹಾನಗರ ಪಾಲಿಕೆ‌ ಆಯುಕ್ತ

ಕಲಬುರಗಿ: 7.50 ಲಕ್ಷ ಬಿಲ್ ಮಂಜೂರಾತಿಗೆ ಲಂಚ ಸ್ವೀಕರಿಸುವಾಗ ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಶಂಕರಣ್ಣ ವನಿಕ್ಯಾಳ್ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಕೆಎಸ್‌ಎಸ್ ಅಧಿಕಾರಿ ಶಂಕರಣ್ಣ 7.50 ಲಕ್ಷ ಬಿಲ್ ಮಂಜೂರು ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಕೋವಿಡ್ ಸುರಕ್ಷಾ ಚಕ್ರ ಹೆಲ್ಪ್ ಲೈನ್ ಮಾಲೀಕ ಶರಣು ಎಂಬುವರ ಬಳಿ ಶೇಕಡಾ 2ರಷ್ಟು ಕಮಿಷನ್ ಗೆ ಬೇಡಿಕೆ ಇಟ್ಟಿದ್ದರು. ಕೋವಿಡ್ 2ನೇ ಅಲೆ ಸಂದರ್ಭದಲ್ಲಿ ಹೆಲ್ಪ್ ಲೈನ್ ಪ್ರಾರಂಭಿಸಲಾಗಿತ್ತು. 50 ಲಕ್ಷಕ್ಕೂ ಹೆಚ್ಚಿನ ಬಿಲ್ ಪಾವತಿ ಬಾಕಿ ಉಳಿದಿತ್ತು. ಈ ಪೈಕಿ 2ನೇ ಕಂತಿನ ಹಣ ಬಿಡುಗಡೆಗೆ ಪಾಲಿಕೆ ಆಯುಕ್ತ, ಅಕೌಂಟೆಂಟ್ ಚನ್ನಪ್ಪ ಮೂಲಕ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಕುರಿತು ಎಸಿಬಿ ಅಧಿಕಾರಿಗಳಿಗೆ ಶರಣು ದೂರು ನೀಡಿದ್ದರು.

ನಿನ್ನೆ(ಜೂ.1) ಸಂಜೆ ಹಣ ಪಡೆಯುವಾಗ ಎಸಿಬಿ ತಂಡ ದಾಳಿ ನಡೆಸಿ ಆಯುಕ್ತ ಶಂಕರಣ್ಣ, ಅಕೌಂಟೆಂಟ್ ಚನ್ನಪ್ಪನನ್ನು ಬಂಧಿಸಿದ್ದಾರೆ. 14,500 ರೂಪಾಯಿ ಲಂಚ ಪಡೆದಿದ್ದಾಗ ದಾಳಿ ನಡೆದಿದೆ.ಚನ್ನಪ್ಪ, ಶರಣು ಎಂಬುವರಿಂದ ಹಣ ಪಡೆದ ಬಗ್ಗೆ ಪಾಲಿಕೆ ಆಯುಕ್ತ ಶಂಕರಣ್ಣ ವನಿಕ್ಯಾಳ್ ಗೆ ಮಾಹಿತಿ ನೀಡಿದ್ದ. ಆಗ ಮನೆಗೆ ಹಣ ತಗೆದುಕೊಂಡು ಬಂದು ಕೊಡುವಂತೆ ಶಂಕರಣ್ಣ ವನಿಕ್ಯಾಳ್ ಹೇಳಿದ್ದರು. ಈ ವೇಳೆ ಎಸಿಬಿ ಪೊಲೀಸರು ಶಂಕರಣ್ಣ ವನಿಕ್ಯಾಳ್ ಮತ್ತು ಚೆನ್ನಪ್ಪನನ್ನು ಟ್ರ್ಯಾಪ್ ಮಾಡಿದಾಗ ಒಂದು ಲಕ್ಷ ನಲವತ್ತೆರಡು ಸಾವಿರ ರೂಪಾಯಿ ವಶಪಡಿಸಿಕೊಂಡಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top