Connect with us

Dvgsuddi Kannada | online news portal | Kannada news online

ಧಾರವಾಡ ಭೀಕರ ಅಪಘಾತ: ಮತ್ತೊಬ್ಬ ಮಹಿಳೆ ಚಿಕಿತ್ಸೆ ಫಲಿಸದೇ ಸಾವು

ಪ್ರಮುಖ ಸುದ್ದಿ

ಧಾರವಾಡ ಭೀಕರ ಅಪಘಾತ: ಮತ್ತೊಬ್ಬ ಮಹಿಳೆ ಚಿಕಿತ್ಸೆ ಫಲಿಸದೇ ಸಾವು

ಧಾರವಾಡ: ಜನವರಿ 15 ರಂದು ತಾಲೂಕಿನ ಇಟ್ಟಿಗಟ್ಟಿ ಬಳಿ ಟೆಂಪೋ ಟ್ರ್ಯಾವೆಲರ್​ ಮತ್ತು ಟಿಪ್ಪರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಿಸದೆ ಇಂದು (ಜನವರಿ 24) ಸಾವನ್ನಪ್ಪಿದ್ದಾರೆ. ಈ ಮೂಲಕ ಈ ಅಪಘಾತದಲ್ಲಿ ಒಟ್ಟು ಮೃತಪಟ್ಟವರ ಸಂಖ್ಯೆ 14 ಏರಿಕೆಯಾಗಿದೆ.

ದಾವಣಗೆರೆಯಿಂದ ಗೆಳತಿಯರ ಜೊತೆಗೆ ಗೋವಾಕ್ಕೆ ತೆರಳುತ್ತಿದ್ದಾಗ ನಡೆದಿದ್ದ ಅಪಘಾತದಲ್ಲಿ ಒಂಬತ್ತು ಮಹಿಳೆಯರು ಸೇರಿ ಒಟ್ಟು ಹನ್ನೊಂದು ಜನರು ಸಾವನ್ನಪ್ಪಿದ್ದರು. ಈ ವೇಳೆ ತೀವ್ರಾ ಗಾಯಗೊಂಡಿದ್ದ ವೇದಾ ಮಂಜುನಾಥ ಎಂಬುವವರನ್ನು ಅಂಬ್ಯುಲೇನ್ಸ್ ಮೂಲಕ ಬೆಂಗಳೂರಿಗೆ ಸಾಗಿಸಲಾಗಿತ್ತು. ತಲೆಗೆ ತೀವ್ರ ಪೆಟ್ಟಾದ ಹಿನ್ನೆಲೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತ ಮಹಿಳೆ ಶಿವಮೊಗ್ಗದ ಮಾಜಿ ಶಾಸಕ ಎಚ್.ಎಂ.ಚಂದ್ರಶೇಖರ್​ರವರ ಸಂಬಂಧಿಯಾಗಿದ್ದು, ಕುಟುಂಬ ಸದಸ್ಯರು ಮಹಿಳೆಯ ಅಂಗಾಂಗಗಳನ್ನು ಬೆಂಗಳೂರು ಮಣಿಪಾಲ್ ಆಸ್ಪತ್ರೆಗೆ ದಾನ ಮಾಡಿದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top
(adsbygoogle = window.adsbygoogle || []).push({});