ಆನೇಕಲ್: ಬೆಂಗಳೂರಿನಿಂದ ಸೇಲಂಗೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ ಕಂಟೈನರ್ ಗೆ ಡಿಕ್ಕಿ ಹೊಡೆದಿದೆ. ಇದರಿಮಧ ಕೆಎಸ್ ಆರ್ ಟಿಸಿ ಬಸ್ ನಲ್ಲಿದ್ದ 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಅತ್ತಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ..
ಬೆಂಗಳೂರಿನಿಂದ ಹೊಸೂರಿಗೆ ಹೋಗುತ್ತಿದ್ದ ಕಂಟೈನರ್ ಲಾರಿಗೆ ಸೋಮವಾರ ಬೆಳಗಿನ ಜಾವ 3:30ರ ಸಮಯದಲ್ಲಿ ಹಿಂಬದಿಯಿಂದ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಬಸ್ನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಬಸ್ನಲ್ಲಿದ್ದ ಸುಮಾರು 10 ಮಂದಿ ಗಾಯಗೊಂಡಿದ್ದು, ಆಕ್ಸ್ಫರ್ಡ್ ಮತ್ತು ಶ್ರೀ ಸಾಯಿ ಆಸ್ಪತ್ರೆಗೆ ರವಾನಿಸಲಾಗಿದೆ.



