Connect with us

Dvgsuddi Kannada | online news portal | Kannada news online

ಬಸ್ – ಕ್ರೂಜರ್ ಕಾರು ನಡುವೆ ಭೀಕರ ಅಪಘಾತ; ಮೂವರು ಸಾವು..!

ಪ್ರಮುಖ ಸುದ್ದಿ

ಬಸ್ – ಕ್ರೂಜರ್ ಕಾರು ನಡುವೆ ಭೀಕರ ಅಪಘಾತ; ಮೂವರು ಸಾವು..!

ಹುಬ್ಬಳ್ಳಿ: ಖಾಸಗಿ ಬಸ್ ಹಾಗೂ ಕ್ರೂಜರ್​ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯವಾಗಿವೆ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಧಾರವಾಡ ಕ್ರಾಸ್ ಬಳಿ ಈ ಘಟನೆ ನಡೆದಿದೆ.

ಮೃತರೆಲ್ಲರೂ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ನಂದಿಗದ್ದಿ ನಿವಾಸಿಗಳಾಗಿದ್ದು,ಇವರು ಹುಬ್ಬಳ್ಳಿಗೆ ಮೃತ ದೇಹವನ್ನು ತರಲು ಹುಬ್ಬಳಿಗೆ ಹೊರಟಿದ್ದರು. ಕಲಘಟಗಿಯ ರಾಯನಾಳ ಬಳಿ ಖಾಸಗಿ ಬಸ್ ಗೆ ಡಿಕ್ಕಿಯಾಗಿದೆ. ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್‌ಗೆ ದಾಖಲು ಮಾಡಲಾಗಿದೆ.

ಸ್ಥಳದಲ್ಲೇ ಇಬ್ಬರು ಸಾವಿಗೀಡಾಗಿದ್ದರು. ಆಸ್ಪತ್ರೆಯಲ್ಲಿ ಕ್ರೂಜರ್ ಚಾಲಕ ಮಾರುತಿ ಮೃತಪಟ್ಟಿದ್ದಾರೆ. ಸ್ಥಳದಲ್ಲಿಯೇ ಮೃತಪಟ್ಟವರನ್ನು ಶಿವನಗೌಡ ಮತ್ತು ಅಮೃತ ಎಂದು ಗುರುತಿಸಲಾಗಿದೆ. ಕ್ರೂಜರ್ ನಲ್ಲಿ ಒಟ್ಟು 5 ಜನರು ಪ್ರಯಾಣಿಸುತ್ತಿದ್ದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top