ರೈತರು ಬೆಳೆ ಸಾಲ, ಬೆಳೆ ವಿಮೆ, ಬರ ಪರಿಹಾರ, ಬೆಂಬಲ ಬೆಲೆ ಸವಲತ್ತು ಪಡೆಯಲು ಎಫ್ ಐಡಿ ಸಂಖ್ಯೆ ಪಡೆಯುವುದು ಕಡ್ಡಾಯ; ಕೂಡಲೆ ಕೃಷಿ ಇಲಾಖೆ ಸಂಪರ್ಕಿಸಿ…

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಸರ್ಕಾರದಿಂದ ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳ ಮೂಲಕ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಯೋಜನೆಗಳ ಪ್ರಯೋಜನ ಪಡೆಯಲು ಪ್ರೂಟ್ಸ್ ತಂತ್ರಾಂಶದಲ್ಲಿ ಸರ್ವೆ ನಂಬರ್‍ಗೆ ಆಧಾರ್ ಸಂಖ್ಯೆ ನಮೂದಿಸಿ ಎಫ್.ಐ.ಡಿ ( Farmer Id) ಸಂಖ್ಯೆ ಪಡೆಯುವುದು ಕಡ್ಡಾಯವಾಗಿದೆ.

ನೋಂದಣಿಯಾದ ವಿವರಗಳನ್ನು ಬ್ಯಾಂಕ್‍ನಿಂದ ಬೆಳೆ ಸಾಲ, ಬೆಳೆ ವಿಮೆ ಹಾಗೂ ಬೆಳೆಹಾನಿ ಪರಿಹಾರ, ಬೆಂಬಲ ಬೆಲೆ. ಬೆಳೆ ನಷ್ಟ ಪರಿಹಾರ / ಇನ್ ಪುಟ್ ಸಬ್ಸಿಡಿ ಮುಂತಾದ ಸವಲತ್ತುಗಳನ್ನು ಫ್ರೂಟ್ ತಂತ್ರಾಂಶದಲ್ಲಿ ನೋಂದಣಿಯಾಗಿರುವ ಜಮೀನಿನ ವಿಸ್ತೀರ್ಣದ ಆಧಾರದ ಮೇಲೆ ಮತ್ತು ಬೆಳೆ ಸಮೀಕ್ಷೆ ಆಧಾರದ ಮೇಲೆ ವಿತರಿಸಲಾಗುವುದರಿಂದ ರೈತರು ತಾವು ಹೊಂದಿರುವ ಎಲ್ಲಾ ಸರ್ವೆ ನಂಬರ್‍ಗಳನ್ನು ಈ https://fruits.karnataka.gov.in/OnlineUserLogin.aspx ತಂತ್ರಾಂಶದಲ್ಲಿ ನೋಂದಾಯಿಸಿಕೊಳ್ಳುವಂತೆ ಕೃಷಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಫ್ರೂಟ್ ಐ.ಡಿ.ಯೊಂದಿಗೆ ಸೇರ್ಪಡೆಯಾಗದೆ ಇರುವ ಸರ್ವೆ ನಂಬರ್‍ಗಳನ್ನು ಸೇರ್ಪಡೆಗೊಳಿಸಲು ಜಿಲ್ಲೆಯ ರೈತರು ಸಮೀಪದ ರೈತ ಸಂಪರ್ಕ ಕೇಂದ್ರಕ್ಕೆ ತಮ್ಮ ಆಧಾರ್ ಕಾರ್ಡ್, ಪಹಣಿ ಪತ್ರ, ಬ್ಯಾಂಕ್ ಖಾತೆ ವಿವರ, ಜಾತಿ ಪ್ರಮಾಣ ಪತ್ರದ ಪ್ರತಿಗಳೊಂದಿಗೆ ಭೇಟಿ ನೀಡಿ ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್, ರೇಷನ್ ಕಾರ್ಡ್ ಮತ್ತು ಎನ್.ಪಿ.ಸಿ.ಐ ಮ್ಯಾಪಿಂಗ್ ಮಾಡಿಸಿಕೊಳ್ಳುವುದು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *