ಬೆಳೆ ವಿಮೆ, ಬೆಳೆ ನಷ್ಟ, ಬೆಳೆ ಪರಿಹಾರ, ಬೆಂಬಲ ಬೆಲೆ ಮತ್ತು ಸರ್ಕಾರದ ವಿವಿಧ ಯೋಜನೆಗಳಡಿ ಬೆಳೆ ಮಾನದಂಡಗಳಿಗೆ ಅನುಗುಣವಾಗಿ ಫಲಾನುಭವಿಗಳ ಆಯ್ಕೆಗಾಗಿ ಬೆಳೆ ಸಮೀಕ್ಷೆ ವಿವರಗಳು ಅತೀ ಅವಶ್ಯವಾಗಿದೆ. ಹೀಗಾಗಿ ರೈತರು ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ತುಂಬಾ ಮಹತ್ವದ್ದಾಗಿದ್ದು, ರೈತರು ತಮ್ಮ ಜಮೀನಿನಲ್ಲಿ ಬೆಳೆದಿರುವ ಬೆಳೆಗಳ ಮಾಹಿತಿಯನ್ನು ರೈತರು ಮೊಬೈಲ್ ಆ್ಯಪ್ದಲ್ಲಿಯಯೇ ಬೆಳೆ ಸಮೀಕ್ಷೆಯ ವಿವರಗಳನ್ನು ನಿಖರವಾಗಿ ದಾಖಲಿಸಬೇಕು.
ಬೆಳೆ ಸಮೀಕ್ಷೆಯ ಮಾಹಿತಿಯನ್ನು ತಾವೇ ಖುದ್ದಾಗಿ ದಾಖಲಿಸಬಹುದಾಗಿದೆ. ಬೆಳೆ ವಿಮೆ, ಬೆಳೆ ನಷ್ಟ, ಬೆಳೆ ಪರಿಹಾರ, ಬೆಂಬಲ ಬೆಲೆ ಮತ್ತು ಸರ್ಕಾರದ ವಿವಿಧ ಯೋಜನೆ ಆಯ್ಕೆಗಾಗಿ ಬೆಳೆ ಸಮೀಕ್ಷೆ ವಿವರ ಅತೀ ಅವಶ್ಯವಾಗಿದೆ. ಈ ಹಿನ್ನಲೆಯಲ್ಲಿ ರೈತರು ವಿಳಂಬ ಮಾಡದೇ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಖುದ್ದಾಗಿ ಆ್ಯಪ್ ಮೂಲಕ ನೋಂದಣಿ ಮಾಡಿಕೊಳ್ಳಲು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರೈತರು ಗೂಗಲ್ ಪ್ಲೇಸ್ಟೋರ್ನಿಂದ ರೈತರ ಬೆಳೆ ಸಮೀಕ್ಷೆ ಎಂಬ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಬೇಕು. ತಾವು ಬೆಳೆದ ಬೆಳೆ ಮಾಹಿತಿಯೊಂದಿಗೆ ಛಾಯಾಚಿತ್ರವನ್ನು ಆ್ಯಪ್ ನಲ್ಲಿ ಅಪ್ ಲೋಡ್ ಮಾಡಬೇಕಿದೆ. ಇದು ಪರಿಹಾರಕ್ಕೆ ಅನುಕೂಲವಾಗಲಿದೆ.



