ಉಪ್ಪಿನಂಗಡಿ: ತೋಟದಲ್ಲಿ ಎಳನೀರು (ಸೀಯಾಳ) ಕೀಳುತ್ತಿರುವಾಗ ಅಲ್ಯೂಮಿನಿಯಂ ದೋಟಿಗೆ ವಿದ್ಯುತ್ ತಂತಿ ಸ್ಪರ್ಶಗೊಂಡು ದಾವಣಗೆರೆ ಮೂಲದ ಕಾರ್ಮಿಕ ವೀರಭದ್ರ (29) ಮೃತಪಟ್ಟ ಘಟನೆ ಬಜತ್ತೂರು ಗ್ರಾಮದ ಕುವೆಚ್ಚಾರ್ ಎಂಬಲ್ಲಿ ನಡೆದಿದೆ.
ಮೃತ ವೀರಭದ್ರ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಪಲ್ಲಾಗಟ್ಟೆ ನಿವಾಸಿ ಗುತ್ಯಪ್ಪ ಎಂಬವರ ಮಗನಾಗಿದ್ದು, ತೋಟದ ಕಾರ್ಮಿಕನಾಗಿ ಕುವೆಚ್ಚಾರ್ನಲ್ಲಿ ಕೆಲಸ ಮಾಡುತ್ತಿದ್ದನು.
ತೋಟದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಹೊಟ್ಟೆ ನೋವು ನಿವಾರಣೆಗೆಂದು ತೆಂಗಿನ ಮರದಿಂದ ಎಳನೀರು ಕೀಳಲೆಂದು ದೋಟಿ ಬಳಸಲು ಮುಂದಾದಾಗ ತೋಟದಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿ ದೋಟಿಗೆ ತಗುಲಿ ವಿದ್ಯುತ್ ಆಘಾತವಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿದರೂ ಸ್ಥಳದಲ್ಲಿಯೇ ವೃತಪಟ್ಟರೆಂದು ವೈದ್ಯರು ತಿಳಿಸಿದ್ದಾರೆ.



