Connect with us

Dvgsuddi Kannada | online news portal | Kannada news online

ತೋಟದಲ್ಲಿ ಎಳನೀರು ಕೀಳುವಾಗ ದೋಟಿಗೆ ವಿದ್ಯುತ್ ಸ್ಪರ್ಶ; ದಾವಣಗೆರೆ ಮೂಲದ ಕಾರ್ಮಿಕ ಸಾವು

death

ಪ್ರಮುಖ ಸುದ್ದಿ

ತೋಟದಲ್ಲಿ ಎಳನೀರು ಕೀಳುವಾಗ ದೋಟಿಗೆ ವಿದ್ಯುತ್ ಸ್ಪರ್ಶ; ದಾವಣಗೆರೆ ಮೂಲದ ಕಾರ್ಮಿಕ ಸಾವು

ಉಪ್ಪಿನಂಗಡಿ: ತೋಟದಲ್ಲಿ ಎಳನೀರು (ಸೀಯಾಳ) ಕೀಳುತ್ತಿರುವಾಗ ಅಲ್ಯೂಮಿನಿಯಂ ದೋಟಿಗೆ ವಿದ್ಯುತ್‌ ತಂತಿ ಸ್ಪರ್ಶಗೊಂಡು ದಾವಣಗೆರೆ ಮೂಲದ ಕಾರ್ಮಿಕ ವೀರಭದ್ರ (29) ಮೃತಪಟ್ಟ ಘಟನೆ ಬಜತ್ತೂರು ಗ್ರಾಮದ ಕುವೆಚ್ಚಾರ್‌ ಎಂಬಲ್ಲಿ ನಡೆದಿದೆ.

ಮೃತ ವೀರಭದ್ರ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಪಲ್ಲಾಗಟ್ಟೆ ನಿವಾಸಿ ಗುತ್ಯಪ್ಪ ಎಂಬವರ ಮಗನಾಗಿದ್ದು, ತೋಟದ ಕಾರ್ಮಿಕನಾಗಿ ಕುವೆಚ್ಚಾರ್‌ನಲ್ಲಿ ಕೆಲಸ ಮಾಡುತ್ತಿದ್ದನು.

ತೋಟದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಹೊಟ್ಟೆ ನೋವು ನಿವಾರಣೆಗೆಂದು ತೆಂಗಿನ ಮರದಿಂದ ಎಳನೀರು ಕೀಳಲೆಂದು ದೋಟಿ ಬಳಸಲು ಮುಂದಾದಾಗ ತೋಟದಲ್ಲಿ ಹಾದು ಹೋಗಿದ್ದ ವಿದ್ಯುತ್‌ ತಂತಿ ದೋಟಿಗೆ ತಗುಲಿ ವಿದ್ಯುತ್‌ ಆಘಾತವಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿದರೂ ಸ್ಥಳದಲ್ಲಿಯೇ ವೃತಪಟ್ಟರೆಂದು ವೈದ್ಯರು ತಿಳಿಸಿದ್ದಾರೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top