ಬೆಂಗಳೂರು: ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ರಾಜ್ಯದಲ್ಲಿ ಇಂದಿನಿಂದ (ಏಪ್ರಿಲ್ 1) ಕೊಬ್ಬರಿ ಖರೀದಿ ಪ್ರಕ್ರಿಯೆ ಆರಂಭವಾಗಲಿದೆ. ರಾಜ್ಯದ 9 ಜಿಲ್ಲೆಗಳಲ್ಲಿ ಉಂಡೆ ಕೊಬ್ಬರಿ ಖರೀದಿ ಪ್ರಕ್ರಿಯೆ ಆರಂಭವಾಗಲಿದ್ದು, ಮಾ. 9 ಕ್ಕೆ ಕೊಬ್ಬರಿ ಮಾರಾಟಕ್ಕೆ ನೋಂದಣಿ ಅಂತ್ಯವಾಗಿದ್ದು, 9 ಜಿಲ್ಲೆಯಿಂದ 58,893 ರೈತರು ನೋಂದಣಿ ಮಾಡಿಸಿದ್ದಾರೆ.
ಮೈಸೂರು, ಚಾಮರಾಜನಗರ ಮತ್ತು ತುಮಕೂರು ಜಿಲ್ಲೆಯಲ್ಲಿ ಮಾರಾಟ ಮಂಡಳಿಯಿಂದ ಕೊಬ್ಬರಿ ಖರೀದಿ ಸಂಸ್ಥೆಯಾಗಿ ನೇಮಿಸಲಾಗಿದೆ. ಹಾಸನ ಸೇರಿ ಉಳಿದ ಜಿಲ್ಲೆಗಳಲ್ಲಿ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ಖರೀದಿ ಸಂಸ್ಥೆಯಾಗಿ ನೇಮಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.



