ಕೃಷಿಯಲ್ಲಿ ನೂತನ ತಂತ್ರಜ್ಞಾನ ಅಳವಡಿಕೆಗೆ ವಿಜ್ಞಾನಿಗಳ ತಂಡ ರಚನೆಗೆ ಸೂಚನೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ಕೃಷಿಯಲ್ಲಿ ಡೋನ್ ತಂತ್ರಜ್ಞಾನ ಬಳಕೆ ಸೇರಿದಂತೆ ಕೀಟನಾಶಕ , ಲಘು ಪೋಷಕಾಂಶಗಳ ಬಳಕೆ ಮತ್ತು ಸಂಶೋಧನೆಯನ್ನು ನಡೆಸಲು ಅನುಕೂಲವಾಗುವಂತೆ ನೂತನ ಪದ್ಧತಿಗಳನ್ನು ಅಭಿವೃದ್ಧಿ ಪಡಿಸಲು ವಿಜ್ಣಾನಿಗಳ ತಂಡಗಳನ್ನು ರಚನೆ ಮಾಡಲು ಕೃಷಿ ವಿಶ್ವವಿದ್ಯಾಲಯಗಳಿಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಸೂಚಿಸಿದ್ದಾರೆ.

ವಿಕಾಸಸೌಧಲ್ಲಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ರೈತರ ಆದಾಯ ದ್ವಿಗುಣಗೊಳಿಸಲು ಸೆಕೆಂಡರಿ ಕೃಷಿಗೆ ಒತ್ತು ನೀಡುವುದರ ಜೊತೆಗೆ ಸೆಕೆಂಡರಿ ಕೃಷಿ ಕುರಿತು ರಾಜ್ಯದ ಎಲ್ಲಾ ಕೃಷಿ ವಿಶ್ವ ವಿದ್ಯಾಲಯಗಳಲ್ಲಿರುವ ನೂತನ ತಾಂತ್ರಿಕತೆಗಳನ್ನು ಒಂದೇ ಸೂರಿನಡಿ ರೈತರಿಗೆ ಲಭ್ಯವಾಗುವಂತೆ ಇನ್ನು ಬೇಷನ್ ಕೇಂದ್ರಗಳ ಮೂಲಕ ರೈತರಿಗೆ ಮಾಹಿತಿ / ತರಬೇತ ನೀಡಲು ತಿಳಿಸಲಾಯಿತು.

ವಿಜ್ಞಾನಿಗಳ ತಂಡ  ಕೃಷಿ ವಿಶ್ವ ವಿದ್ಯಾಲಯಗಳಲ್ಲಿ ಅಭಿವೃದ್ಧಿಪಡಿಸಿರುವ ಬೆಳೆಗಳ ತಳಿಗಳನ್ನು ಹಾಗೂ ಉತ್ತಮ ತಾಂತ್ರಿಕತೆಗಳ ಕುರಿತು ವ್ಯಾಪಕ ಪ್ರಚಾರ ನೀಡುವುದು. ಕೃಷಿ ಇಲಾಖೆಯು ಕೃಷಿ ವಿಶ್ವ ವಿದ್ಯಾಲಯಗಳು ಅಭಿವೃದ್ಧಿಪಡಿಸಿರುವ ಉತ್ತಮ ತಳಿಗಳನ್ನು ಸಹಾಯಧನ ಕಾರ್ಯಕ್ರಮದಡಿ ತರಲು ಕ್ರಮವಹಿಸಲು ವಿವಿಧ ಸೂಚಿಸಿದರು.

ಉನ್ನತಾಧಿಕಾರದ ಸಮಿತಿಯಲ್ಲಿ ಕೃಷಿ , ತೋಟಗಾರಿಕೆ , ರೇಷ್ಮೆ , ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು , ಹಾಗೂ ವಿವಿಧ ಕೃಷಿ ತೋಟಗಾರಿಕೆ / ಪಶುಸಂಗೋಪನಾ ವಿಶ್ವವಿದ್ಯಾಲಯಗಳ ಹಾಗೂ ಕೃಷಿ ಕುಲಪತಿಗಳು , ಆಯುಕ್ತರು , ನಿರ್ದೇಶಕರು ಪಂಡಿತ ಪ್ರಶಸ್ತಿ ವಿಜೇತರು ಉಪಸ್ಥಿತರಿದ್ದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *