Connect with us

Dvgsuddi Kannada | online news portal | Kannada news online

ಒಂದು ವರ್ಷದೊಳಗೆ ಬಾಕಿ ಉಳಿದಿರುವ ಕೃಷಿ ಪಂಪ್ ಸೆಟ್ ಗಳಿಗೆ ಟಿಸಿ ಸೌಲಭ್ಯ; ಇಂಧನ ಸಚಿವ

ಪ್ರಮುಖ ಸುದ್ದಿ

ಒಂದು ವರ್ಷದೊಳಗೆ ಬಾಕಿ ಉಳಿದಿರುವ ಕೃಷಿ ಪಂಪ್ ಸೆಟ್ ಗಳಿಗೆ ಟಿಸಿ ಸೌಲಭ್ಯ; ಇಂಧನ ಸಚಿವ

ಬೆಂಗಳೂರು: ಕೃಷಿ (agriculture)  ಪಂಪ್ ಸೆಟ್ ಅಕ್ರಮ- ಸಕ್ರಮ ಯೋಜನೆಯಡಿ 2023ರ ನವೆಂಬರ್ ಗಡುವಿನವರೆಗೆ 4.50 ಲಕ್ಷ ಅರ್ಜಿಗಳು ಸಲ್ಲಿಕೆ ಸಲ್ಲಿಕೆಯಾಗಿದ್ದು, ಇದುವರೆಗೆ 2 ಲಕ್ಷ ಪಂಪ್ ಸೆಟ್ ಸಕ್ರಮಗೊಳಿಸಿ ಟಿಸಿ ಸೌಲಭ್ಯ ಒದಗಿಸಲಾಗಿದೆ. ಬಾಕಿ ಉಳಿದ ಪಂಪ್ ಸೆಟ್ ಗಳಿಗೆ ಒಂದು ವರ್ಷದೊಳಗೆ ಟಿಸಿ ಒದಗಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ .ಜಾರ್ಜ್ ಹೇಳಿದ್ದಾರೆ.

ರಾಜ್ಯದಲ್ಲಿ ಬಿರು ಬಿಸಿಲಿನ ನಡುವೆಯೂ ಮಳೆ ಮುನ್ಸೂಚನೆ; ಈ ಜಿಲ್ಲೆಗಳಲ್ಲಿ ಹಗುರ ಮಳೆ

ಅಧಿವೇಶನದಲ್ಲಿ ಜೆಡಿಎಸ್ ಸದಸ್ಯ ಸಿ.ಬಿ. ಸುರೇಶ್ ಬಾಬು ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಒಂದು ವರ್ಷದೊಳಗೆ ಕೃಷಿ ಪಂಪ್ ಸೆಟ್ ಅಕ್ರಮ -ಸಕ್ರಮ ಯೋಜನೆಯಡಿ ಬಾಕಿ ಉಳಿದ ಅರ್ಜಿಗಳ ವಿಲೇವಾರಿಗೆ ಕ್ರಮ ವಹಿಸಲಾಗುವುದು.3000 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸಿ ಕೃಷಿ ಪಂಪ್ಸೆಟ್ ಗಳಿಗೆ ಬಳಸುವ ಗುರಿಯಿದೆ. ಟ್ರಾನ್ಸ್ಫಾರ್ಮರ್ ಬ್ಯಾಂಕ್ ಮಾಡಲಾಗಿದ್ದು, ಎಲ್ಲೆಡೆ ಅಗತ್ಯಕ್ಕಿಂತ ಹೆಚ್ಚು ಟ್ರಾನ್ಸ್ಫಾರ್ಮರ್ ಗಳ ದಾಸ್ತಾನು ಇದೆ. ದೂರು ಬಂದ 48 ಗಂಟೆಯೊಳಗೆ ಟಿಸಿ ಬದಲಾವಣೆಗೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top