ರೈತರ ಟ್ರ್ಯಾಕ್ಟರ್ ಗಳಿಗೆ ಡೀಸೆಲ್ ಸಹಾಯ ಧನ ನೀಡುವ ‘ರೈತ ಶಕ್ತಿ’ ಯೋಜನೆಗೆ ಸಿಎಂ ಚಾಲನೆ: ಕೃಷಿ ಸಚಿವ ಬಿ. ಸಿ. ಪಾಟೀಲ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ರೈತರ ಟ್ರ್ಯಾಕ್ಟರ್ ಗಳಿಗೆ ಡೀಸೆಲ್ ಸಹಾಯಧನ ನೀಡುವ ‘ರೈತ ಶಕ್ತಿ’ ಯೋಜನೆಗೆ ಈ ತಿಂಗಳ ಅಂತ್ಯದಲ್ಲಿ ಚಾಲನೆ ಸಿಗಲಿದ್ದು, ನೇರ ನಗದು ವರ್ಗಾವಣೆ ಮೂಲಕ ಡೀಸೆಲ್ ಖರೀದಿಗೆ ಸಹಾಯಧನ ನೀಡಲಾಗುತ್ತದೆ. ಪ್ರತಿ ಎಕರೆಗೆ ರೂ.250 ಗಳಂತೆ ಗರಿಷ್ಠ 5 ಎಕರೆಗೆ ರೂ.1250 ಗಳನ್ನು ರೈತರ ಖಾತೆಗೆ ಡಿ ಬಿ ಟಿ ಮೂಲಕ ವರ್ಗಾವಣೆ ಮಾಡಲಾಗುವುದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜನವರಿ ಅಂತ್ಯದಲ್ಲಿ  ಚಾಲನೆ ನೀಡಲಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಮಾಹಿತಿ ನೀಡಿದ್ದಾರೆ.

ಈಗಾಗಲೇ ಕಿಸಾನ್ ಸಮ್ಮಾನ್ ಯೋಜನೆಗೆ ಫ್ರುಟ್ಸ್ ವೆಬ್ ಸೈಟ್  ಮೂಲಕ ರೈತರ ನೋಂದಣಿ ಗುರುತಿನ ಸಂಖ್ಯೆ ಬಳಸಿ ಕ ತಂತ್ರಾಂಶದ ಮೂಲಕ ಇದನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ರೈತರು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ. ಕೃಷಿ ಭೂಮಿಯ ವಿಸ್ತೀರ್ಣದ ಆಧಾರದಲ್ಲಿ ರೈತರ ಖಾತೆಗೆ ಸಹಾಯಧನ ವರ್ಗಾವಣೆಯಾಗಲಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *