ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಸಮಾಜದ ಹಿರಿಯರಾದ ಡಾ.ಶಾಮನೂರು ಶಿವಶಂಕರಪ್ಪ ನಿಧನ ನಂತರ ಸುಪ್ರೀಂ ಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಡಾ.ಶಿವರಾಜ್ ಪಾಟೀಲ ಅವರನ್ನು ಆ ಸ್ಥಾನಕ್ಕೆ ಆಯ್ಕೆ ಮಾಡುವಂತೆ ಶ್ರೀರಂಭಾಪುರಿ ಡಾ.ವೀರಸೋಮೇಶ್ವರ ಸ್ವಾಮೀಜಿ ಒತ್ತಾಯಿಸಿದ್ದಾರೆ.
ದಾವಣಗೆರೆ: ಅಡಿಕೆ ಬೆಲೆಯಲ್ಲಿ ದಿಢೀರ್ ಕುಸಿತ; ಏಕಾಏಕಿ ಪ್ರತಿ ಕ್ವಿಂಟಲ್ ಗೆ 2 ಸಾವಿರ ಇಳಿಕೆ
ಶೇಷಾದ್ರಿಪುರದಲ್ಲಿ ಸಾರ್ವಜನಿಕ ಇಷ್ಟಲಿಂಗ ಮಹಾಪೂಜೆ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. 120 ವರ್ಷಗಳ ಸುದೀರ್ಘ ಇತಿಹಾಸವಿರುವ ವೀರಶೈವ ಲಿಂಗಾಯತ ಸಮುದಾಯದ ಪ್ರಾತಿನಿಧಿಕ ಸಂಸ್ಥೆಯಾಗಿರುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಡಾ.ಶಿವರಾಜ್ ಪಾಟೀಲ ಅವರನ್ನು ಆಯ್ಕೆ ಮಾಡಬೇಕು ಎಂದು ತಿಳಿಸಿದರು.
ದಾವಣಗೆರೆ ದಕ್ಷಿಣಕ್ಕೆ ಎಸ್.ಎಸ್.ಗಣೇಶ್ ಅಭ್ಯರ್ಥಿಯಾಗಲಿ; ಬಿಜೆಪಿ ಹಿರಿಯ ನಾಯಕ ರವೀಂದ್ರನಾಥ್
ಹಾನಗಲ್ ಕುಮಾರ ಮಹಾಸ್ವಾಮಿಗಳು ಸಮುದಾಯದ ಒಗ್ಗಟ್ಟು ಮತ್ತು ಐಕ್ಯತೆಗಾಗಿ ಸಂಸ್ಥಾ ಪಿಸಿರುವ ಮಹಾಸಭಾ ಅಧ್ಯಕ್ಷರಾಗಿದ್ದ ಡಾ.ಶಾಮನೂರು ಶಿವಶಂಕರಪ್ಪ ಅವರು ತಮ್ಮ ವೈಯಕ್ತಿಕ ಹಿತಾಸಕ್ತಿಗಿಂತಲೂ ಸಮುದಾಯದ ಹಿತಕ್ಕಾಗಿ ಧ್ವನಿ ಎತ್ತುತ್ತಿದ್ದ ಓರ್ವ ಧೀಮಂತ ನಾಯಕರಾಗಿದ್ದರು ಎಂದರು.
ರಾಜಕೀಯೇತರ ವ್ಯಕ್ತಿಗಳು ಮಹಾಸಭಾದ ಅಧ್ಯಕ್ಷರಾಗುವುದರಿಂದ ಸಮಾಜಕ್ಕೆ ಅನ್ಯಾಯವಾದಾಗ ನಿಷ್ಠೂರವಾಗಿ ಧ್ವನಿ ಎತ್ತಲು ಸಾಧ್ಯವಾಗುತ್ತದೆ. ಅಂತಹ ವ್ಯಕ್ತಿತ್ವ ಹೊಂದಿರುವ ನ್ಯಾ.ಶಿವರಾಜ ಪಾಟೀಲರನ್ನು ಅವಿರೋಧವಾಗಿ ಆಯ್ಕೆ ಮಾಡುವುದರಿಂದ ಸಮಾಜದ ಸಂಘಟನೆಗೆ ದೊಡ್ಡ ಶಕ್ತಿ ಬರುತ್ತದೆ. ಕಾನೂನು ಮತ್ತು ಧರ್ಮ ಎರಡನ್ನೂ ಅರಿತಿರುವ ಪಾಟೀಲರ ಆಯ್ಕೆಗೆ ಯಾವುದೇ ಅಪಸ್ವರ ಬರುವುದಿಲ್ಲ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಎಡೆಯೂರಿನ ಶ್ರೀರೇಣುಕ ಶಿವಾಚಾರ್ಯರು, ಚಿಕ್ಕಕಲ್ಲುಬಾಳು ಶ್ರೀಗಳು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಪ್ರಕಾಶ್ ಅಂಗಡಿ ದಂಪತಿಗಳು ಮತ್ತಿತರರು ಭಾಗಿಯಾಗಿದ್ದರು.



