Connect with us

Dvgsuddi Kannada | online news portal | Kannada news online

ಕರ್ನಾಟಕದಲ್ಲಿ ಅಡಿಕೆ ಪ್ರತ್ಯೇಕ ಮಂಡಳಿ ಸ್ಥಾಪನೆ ಇಲ್ಲ; ಕೇಂದ್ರ ಸರ್ಕಾರ ಸ್ಪಷ್ಟನೆ

arecanut crop

ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ಅಡಿಕೆ ಪ್ರತ್ಯೇಕ ಮಂಡಳಿ ಸ್ಥಾಪನೆ ಇಲ್ಲ; ಕೇಂದ್ರ ಸರ್ಕಾರ ಸ್ಪಷ್ಟನೆ

ನವದೆಹಲಿ: ಅಡಿಕೆ ಕೃಷಿ ಪ್ರದೇಶ ವಿಸ್ತರಣೆ ಹಾಗೂ ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸುವ ಸಲುವಾಗಿ ಕರ್ನಾಟಕದಲ್ಲಿ ಪ್ರತ್ಯೇಕ ಅಡಿಕೆ ಮಂಡಳಿ ಸ್ಥಾಪಿಸುವ ಪ್ರಸ್ತಾವ ಕೇಂದ್ರ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ವಾಣಿಜ್ಯ ಹಾಗೂ ಕೈಗಾರಿಕಾ ಸಚಿವಾಲಯ ರಾಜ್ಯ ಸಚಿವ ಜಿತಿನ್‌ ಪ್ರಸಾದ್‌ ಸ್ಪಷ್ಪಡಿದ್ದಾರೆ.

ಕಾಫಿ ಮಂಡಳಿ, ರಬ್ಬರ್ ಮಂಡಳಿ, ಟೀ ಮಂಡಳಿ ಮುಂತಾದವುಗಳ ಮಾದರಿಯಲ್ಲಿ ಅಡಿಕೆ ಮಂಡಳಿ ಸ್ಥಾಪಿಸುವ ಪ್ರಸ್ತಾವ ಇದೆಯೇ ಎಂದು ರಾಜ್ಯಸಭಾ ಸದಸ್ಯ ಡಿ.ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭೆಯಲ್ಲಿ ಪ್ರಶ್ನೆ ಕೇಳಿದ್ದರು.

ರಾಜ್ಯದಲ್ಲಿ ಹೆಚ್ಚು ಉತ್ಪಾದನೆ

ದೇಶದಲ್ಲಿ ಅತೀ ಹೆಚ್ಚು ಅಡಿಕೆ ಉತ್ಪಾದಿಸುವ ರಾಜ್ಯ ಕರ್ನಾಟಕ. 2023-24ರ ಅಂದಾಜಿನ ಪ್ರಕಾರ, ರಾಜ್ಯವು 6.77 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಅಂದಾಜು 10.32 ಲಕ್ಷ ಟನ್ ಅಡಿಕೆ ಉತ್ಪಾದಿಸುತ್ತದೆ. ಇದು ದೇಶದ ಒಟ್ಟು ಅಡಿಕೆ ಉತ್ಪಾದನೆಯ ಶೇ 73 ಮತ್ತು ಒಟ್ಟು ಅಡಿಕೆ ಪ್ರದೇಶದ ಶೇ 71 ರಷ್ಟಿದೆ.

ಎಲೆಚುಕ್ಕಿ ರೋಗ ನಿರ್ವಹಣೆಗೆ 37 ಕೋಟಿ

ಅಡಿಕೆಯ ಎಲೆ ಚುಕ್ಕೆ ರೋಗ ನಿರ್ವಹಿಸಲು 2024-25ರಲ್ಲಿ ರಾಜ್ಯಕ್ಕೆ 37 ಕೋಟಿ ಮಂಜೂರು ಮಾಡಿರುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.ಅಡಿಕೆ ಬೆಳೆಗೆ ರೋಗ ಬಾಧಿಸಿದ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಕೋರಿಕೆಯ ಮೇರೆಗೆ ಕೃಷಿ ಸಚಿವಾಲಯವು ಮಧ್ಯಪ್ರವೇಶಿಸಿ ಪರಿಹಾರ ಕ್ರಮಗಳನ್ನು ಸೂಚಿಸಿದೆ ಮತ್ತು ಆರ್ಥಿಕ ನೆರವು ನೀಡಿದೆ ಎಂದು ಸಚಿವರು ಹೇಳಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top