ಚಿತ್ರದುರ್ಗ; ರಾಜ್ಯ ಚುನಾವಣೆ ಕಣ ರಂಗೇರುತ್ತಿದ್ದು, ಚುನಾವಣೆಗೆ ಕೇವಲ 6 ದಿನ ಬಾಕಿ ಇರುವಾಗ ಕಾಂಗ್ರೆಸ್ ನ ಮಾಜಿ ಶಾಸಕ ಎಸ್. ಕೆ. ಬಸವರಾಜನ್, ಅವರ ಪತ್ನಿ ಚಿತ್ರದುರ್ಗ ಪಕ್ಷೇತರ ಅಭ್ಯರ್ಥಿ ಸೌಭಾಗ್ಯ ಬಸವರಾಜನ್ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಕಮ್ಮರೆಡ್ಡಿ ಸಮುದಾಯ ಭನದಲ್ಲಿ ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ತಿಪ್ಪಾರೆಡ್ಡಿ ಪರ ಪ್ರಚಾರ ಸಭೆ ನಡೆಯುತ್ತಿರುವ ಸಂದರ್ಭದಲ್ಲಿ ಜಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಎಸ್. ಕೆ. ಬಸವರಾಜನ್, ಚಿತ್ರದುರ್ಗ ಪಕ್ಷೇತರ ಅಭ್ಯರ್ಥಿ ಸೌಭಾಗ್ಯ ಬಸವರಾಜನ್ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಈ ಬಾರಿ ಚಿತ್ರದುರ್ಗದಿಂದ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಮಾಜಿ ಶಾಸಕ ಬಸವರಾಜನ್ ತಮ್ಮ ಪತ್ನಿಯನ್ನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಿದ್ದರು. ಇದೀಗ ಒಂದು ವಾರ ಚುನಾವಣೆ ಬಾಕಿ ಇರುವಾಗ ಪಕ್ಷೇತ್ರ ಅಭ್ಯರ್ಥಿ ಸೌಭಾಗ್ಯ ಚುನಾವಣಾ ಕಣದಿಂದ ಹಿಂದೆ ಸರಿದು, ಬಿಜೆಪಿಗೆ ಬೆಂಬಲ ಸೂಚಿಸಿದ್ದಾರೆ. ಇದರ ಜೊತೆಗೆ ಬಿಜೆಪಿ ಸೇರಿದ್ದಾರೆ. ಈ ಬೆಳವಣಿಗೆಯಿಂದ ಚಿತ್ರದುರ್ಗ ಬಿಜೆಪಿಗೆ ಚುನಾವಣೆ ಹೊತ್ತಿನಲ್ಲಿ ಮತ್ತಷ್ಟು ಬಲ ಬಂದಿದೆ.



