Connect with us

Dvgsuddi Kannada | online news portal | Kannada news online

ತಡರಾತ್ರಿ ಕಾರುಗಳ ಮುಖಾಮುಖಿ ಡಿಕ್ಕಿ: ಚಾಲಕರಿಬ್ಬರು ಸಾವು

ಕ್ರೈಂ ಸುದ್ದಿ

ತಡರಾತ್ರಿ ಕಾರುಗಳ ಮುಖಾಮುಖಿ ಡಿಕ್ಕಿ: ಚಾಲಕರಿಬ್ಬರು ಸಾವು

ಬಾಗಲಕೋಟೆ: ತಡ ರಾತ್ರಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಚಾಲಕರಿಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ಛಬ್ಬಿ ಗ್ರಾಮದ ಬಳಿ ನಡದಿದೆ. ಕಾರುಗಳಲ್ಲಿದ್ದ ಮೂವರಿಗೆ ಗಾಯವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ನಿನ್ನೆ ತಡರಾತ್ರಿ ಎರಡು ಕಾರುಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಎರಡು ಕಾರಿನ ಚಾಲಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾಗರ ಲಮಾಣಿ (29), ರಂಗಪ್ಪ ಕಟ್ಟಿಮನಿ (26) ಮೃತ ದುರ್ದೈವಿಗಳಾಗಿದ್ದಾರೆ. ಸಾಗರ ಲಮಾಣಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ದಾಡಿಬಾವಿ ತಾಂಡಾ ನಿವಾಸಿಯಾಗಿದ್ದು, ರಂಗಪ್ಪ ಕಟ್ಟಿಮನಿ ವಾಂಬೆ ಕಾಲೋನಿ ನಿವಾಸಿ ಎಂದು ತಿಳಿದುಬಂದಿದೆ.

ಕಾರುಗಳಲ್ಲಿದ್ದ ಮೂವರಿಗೆ ಗಾಯವಾಗಿದೆ. ಗಾಯಾಳುಗಳು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಕಲಾದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಕ್ರೈಂ ಸುದ್ದಿ

To Top