ಕರ್ನಾಟಕ ಬಂದ್ ; ವಿವಿಧ ಸಂಘಟನೆಗಳ ಬೆಂಬಲ- ಕೆಲ ಸಂಘಟನೆಗಳು ನೈತಿಕ ಬೆಂಬಲ-ಏನಿರುತ್ತೆ? ಏನಿರಲ್ಲ?

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ಕೆಎಸ್ ಆರ್ ಟಿಸಿ ನೌಕರರ ಮೇಲೆ ಮರಾಠಿ ಪುಂಡರು ನಡೆಸಿದ ಅಟ್ಟಹಾಸ, ದಬ್ಬಾಳಿಕೆ ಖಂಡಿಸಿ ಕನ್ನಡ ಪರ ಸಂಘಟನೆಗಳು ನಾಳೆ (ಮಾ.22) ಕರ್ನಾಟಕ ಬಂದ್​ಗೆ (Karnataka bandh) ಕರೆ ನೀಡಿವೆ.

ದಾವಣಗೆರೆ: ಅಡಿಕೆ ಧಾರಣೆ; ಸತತ ಕುಸಿತ‌ ಬಳಿಕ ಭರ್ಜರಿ ಏರಿಕೆ – ಮಾ.21ರ ದರ ಎಷ್ಟಿದೆ..?

ಬೆಳಗ್ಗೆ 06 ಗಂಟೆಯಿಂದ ಸಂಜೆ 06 ಗಂಟೆವರೆಗೆ ಬಂದ್ ನಡೆಯಲಿದೆ ಎಂದು ಕನ್ನಡಪರ ಸಂಘಟನೆಗಳು ತಿಳಿಸಿವೆ. ಒಟ್ಟು 12 ಗಂಟೆಗಳ ಕಾಲ ರಾಜ್ಯಾದ್ಯಂತ ಬಂದ್‌ಗೆ ಕರೆ ನೀಡಲಾಗಿದೆ ಎಂದು ಕನ್ನಡ ಒಕ್ಕೂಟ-ಕರ್ನಾಟಕ ರಾಜ್ಯ ಸಂಘಟನೆ ಮಾಹಿತಿ ನೀಡಿದೆ.

ಕರ್ನಾಟಕ ಬಂದ್; ನಾಳೆ ಶಾಲಾ-ಕಾಲೇಜ್ ರಜೆ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಹತ್ವದ ಹೇಳಿಕೆ

ಕನ್ನಡ ಪರ ಹೋರಾಟಗಾರ ವಾಟಾಳ್​ ನಾಗರಾಜ್​ ನೇತೃತ್ವದ ಈ ಬಂದ್​ಗೆ ಹಲವು ಸಂಘಟನೆಗಳು ಬೆಂಬಲ ಸೂಚಿಸಿದರೆ, ಇನ್ನೂ ಕೆಲವು ಸಂಘಟನೆಗಳು ನೈತಿಕ ಬಂಬಲವಷ್ಟೇ ಕೊಟ್ಟಿವೆ. ರಾಜ್ಯ ಸರ್ಕಾರ ಕೂಡ ಬಂದ್​ಗೆ ಬೆಂಬಲ ಸೂಚಿಸಿಲ್ಲ. ಪ್ರತಿಭಟನೆ ಮೂಲಕ ಬಂದ್​ಗೆ ಕರೆ ಕೊಡುವ ಅವಶ್ಯಕತೆ ಇರಲಿಲ್ಲ. ತಮ್ಮ ಸಮಸ್ಯೆಗಳ ಕುರಿತಂತೆ ರಾಜ್ಯ ಸರ್ಕಾರದೊಂದಿಗೆ ಚರ್ಚೆ ನಡೆಸಬಹುದಿತ್ತು ಎಂದು ಡಿಸಿಎಂ ಡಿಕೆ ಶಿವಕುಮಾರ್​ ಹೇಳಿದ್ದಾರೆ.

ಏನಿರುತ್ತೆ? ಏನಿರಲ್ಲ?

ಬಂದ್​ಗೆ ರಾಜ್ಯ ಸರ್ಕಾರ ಬೆಂಬಲ ಸೂಚಿಸದ ಹಿನ್ನೆಲೆ ಸರ್ಕಾರಿ ಬಸ್ ಸಂಚಾರ ಎಂದಿನಂತೆ ಇರಲಿದೆ. ಶಾಲಾ-ಕಾಲೇಜುಗಳು, ಸರ್ಕಾರಿ ಕಚೇರಿಗಳು ತೆರೆದಿರಲಿವೆ. ಖಾಸಗಿ ಶಾಲೆಗಳ ಒಕ್ಕೂಟ ಬಂದ್​ಗೆ ನೈತಿಕ ಬೆಂಬಲ ಸೂಚಿಸಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿಲ್ಲ. ಮಕ್ಕಳಿಗೆ ಪರೀಕ್ಷೆಗಳು ನಡೆಯುತ್ತಿದ್ದು, ರಜೆ ಕೊಡಲು ಸಾಧ್ಯವಿಲ್ಲ ಎಂದು ತಿಳಿಸಿದೆ.

ಬಿಎಂಟಿಸಿ, ನಮ್ಮ ಮೆಟ್ರೋ, ಕೆಎಸ್​ಆರ್​ಟಿಸಿ, ಆಸ್ಪತ್ರೆ ವೈದ್ಯಕೀಯ ಸೇವೆಗಳು, ಉಪಹಾರ ಕ್ಯಾಂಟೀನ್​, ಹೋಟೆಲ್​ಗಳು, ಶಾಲಾ-ಕಾಲೇಜು, ರೆಸ್ಟೋರೆಂಟ್​, ಪಬ್​ಗಳು ಎಂದಿನಂತೆ ತೆರದಿರಲಿವೆ. ಚಿತ್ರಮಂದಿರಗಳಲ್ಲಿ ಬೆಳಗ್ಗಿನ ಪ್ರದರ್ಶನ ನಡೆಯುವುದಿಲ್ಲ.ಓಲಾ, ಊಬರ್​ ಆಟೋ, ಟ್ಯಾಕ್ಸಿ ಸೇವೆಗಳಲ್ಲಿ ವ್ಯತ್ಯಯ ಆಗುವ ಸಾಧ್ಯ ಇದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *