Connect with us

Dvgsuddi Kannada | online news portal | Kannada news online

ಬಂದ್ ಮೂಲಕ ಜನರಿಗೆ ತೊಂದರೆ ಕೊಡಬೇಡಿ: ಸಿಎಂ ಬಸವರಾಜ ಬೊಮ್ಮಾಯಿ

cm basavaraj bommai.jpg 22

ಪ್ರಮುಖ ಸುದ್ದಿ

ಬಂದ್ ಮೂಲಕ ಜನರಿಗೆ ತೊಂದರೆ ಕೊಡಬೇಡಿ: ಸಿಎಂ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ : ಕಳೆದ ಎರಡು ವರ್ಷಗಳಿಂದ ಕೋವಿಡ್ ಕಾರಣದಿಂದಾಗಿ ಈಗತಾನೇ ಆರ್ಥಿಕ ಚಟುವಟಿಕೆಗಳು ಚೇತರಿಸಿಕೊಳ್ಳುತ್ತಿವೆ. ರೈತರು, ಬಡವರು, ಕೂಲಿ ಕಾರ್ಮಿಕರು, ಬೀದಿ ವ್ಯಾಪಾರಸ್ಥರು, ಗಾರ್ಮೆಂಟ್ಸ್ ನೌಕರರು, ಕೈಗಾರಿಕಾ ಉದ್ಯಮಿಗಳು ಸೇರಿದಂತೆ ಪ್ರತಿಯೊಂದು ಚಟುವಟಿಕೆಗಳು ನಿಧಾನವಾಗಿ ಆರಂಭವಾಗಿವೆ. ಇಂತಹ ಸಂದರ್ಭದಲ್ಲಿ ಪುನಃ ಬಂದ್ ನಡೆಸುವ ಮೂಲಕ ಜನರಿಗೆ ತೊಂದರೆ ಕೊಡಬೇಡಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಕೃಷಿ ಕಾಯ್ದೆ ಯಾರಿಗೂ ತೊಂದರೆಯಾಗುವುದಿಲ್ಲ. ನಾನು ಈಗಲೂ ಕೂಡ ರೈತ ಸಂಘಟನೆಗಳು ಹಾಗೂ ಮುಖಂಡರಲ್ಲಿ ಬಂದ್ ಆಚರಿಸುವುದನ್ನು ನಿಲ್ಲಿಸಿ ಎಂದು ಮನವಿ ಮಾಡುತ್ತೇನೆ. ಒಬ್ಬರಿಗೆ ತೊಂದರೆ ಕೊಟ್ಟು ಬಂದ್ ಮಾಡುವುದರಿಂದ ಉಪಯೋಗವಿಲ್ಲ. ಏನೇ ಸಮಸ್ಯೆಗಳಿದ್ದರೂ ಬಂದು ಚರ್ಚಿಸಿ ಎಂದು ಮನವಿ ಮಾಡಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top