ಸಿಎಂ ಮನವಿಗೆ ಸ್ಪಂದಿಸಿದ ಕನ್ನಡಪರ ಸಂಘಟನೆಗಳು; ನಾಳೆ ಬಂದ್ ಇರಲ್ಲ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ಕರ್ನಾಟಕ ಬಂದ್ ಗೊಂದಲ ಕೊನೆಗೂ ಬಗೆಹರಿದಂತಾಗಿದೆ. ನಾಳೆ (ಡಿ. 31)ಕರ್ನಾಟಕ ಬಂದ್​ ಗೆ ಕರೆ ನೀಡಿದ್ದ ಕನ್ನಡಪರ ಸಂಘಟನೆಗಳು ಇದೀಗ ತಮ್ಮ ನಿರ್ಧಾರದಿಂದ ಹಿಂದೆ ಸರಿದಿವೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕನ್ನಡಪರ ಸಂಘಟನೆಗಳ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಿಗಾಗಿ ನಾಳೆ ಕರ್ನಾಟಕ ಬಂದ್ ಇರುವುದಿಲ್ಲ ಎಂದು ಸಿಎಂ‌ ಸ್ಪಷ್ಟಪಡಿಸಿದ್ದಾರೆ. ಕನ್ನಡಪರ ಹೋರಾಟಗಾರರಾದ ವಾಟಾಳ್​ ನಾಗರಾಜ್, ಪ್ರವೀಣ್​ಕುಮಾರ್ ಶೆಟ್ಟಿ, ಸಾ.ರಾ.ಗೋವಿಂದು ಅವರು ಬಂದ್​ಗೆ ಕರೆ ನೀಡಿದ್ದರು. ಬಂದ್ ನಡೆಸದಂತೆ‌ ಸಿಎಂ‌ ಮನವಿ ಮಾಡಿದ್ದರು.ಕೊನೆಗೂ ಅವರು ಬಂದ್ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ ಎಂದು ತಿಳಿಸಿದ್ದಾರೆ.

ಎಂಇಎಸ್ ಬಗ್ಗೆ ಸರ್ಕಾರ ಏನು ಮಾಡಬೇಕೋ ಅದನ್ನು ಮಾಡುತ್ತದೆ. ಹೀಗಾಗಿ ನಾಳೆ ಬಂದ್ ಇರುವುದಿಲ್ಲ. ಈಗಾಗಲೇ ಘೋಷಿಸಲಾಗಿರುವ ಬಂದ್ ಮುಂದೂಡಲಾಗಿದ್ದು, ಹೊಸ ದಿನಾಂಕ‌ ತಿಳಿಸಲಾಗುವುದು. ಬಂದ್ ಬದಲಿಗೆ ನಾಳೆ ಬೆಳಗ್ಗೆ 10.30ಕ್ಕೆ ಪುರಭವನದಿಂದ ಕೆಂಪೇಗೌಡ ಬಸ್​ ನಿಲ್ದಾಣ, ಸ್ವಾತಂತ್ರ್ಯ ಉದ್ಯಾನದವರೆಗೆ ಕನ್ನಡಪರ ಸಂಘಟನೆಗಳಿಂದ ಬೃಹತ್ ಮೆರವಣಿಗೆ ನಡೆಯಲಿದೆ ಎಂದು ಅವರು ಸ.ರಾ ಗೋವಿಮದ್ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *