ಅಖಿಲ ಭಾರತ ಬ್ಯಾಂಕ್ ಮುಷ್ಕರ; ಗ್ರಾಹಕರು ಪರದಾಟ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ಬ್ಯಾಂಕುಗಳ ಖಾಸಗೀಕರಣ ವಿರೋಧಿಸಿ ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್(ಯುಎಫ್ ಬಿಯು)  ಬ್ಯಾಂಕ್ ನೌಕರರು ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿರುವುದರಿಂದ ವ್ಯವಹಾರಗಳಿಗೆ ವ್ಯತ್ಯಯವುಂಟಾಗಿದೆ.

ಯುಎಫ್ ಬಿಯು ನಡಿ 9 ಒಕ್ಕೂಟಗಳು ಇದ್ದು ಇಂದು ಮತ್ತು ನಾಳೆ ಮುಷ್ಕರಕ್ಕೆ ಕರೆ ನೀಡಿವೆ. ಮುಷ್ಕರದಲ್ಲಿ ಸುಮಾರು 10 ಲಕ್ಷ ಬ್ಯಾಂಕ್ ನೌಕರರು ಮತ್ತು ಅಧಿಕಾರಿಗಳು ಭಾಗವಹಿಸುತ್ತಿದ್ದಾರೆ.ಖಾಸಗಿ ಬ್ಯಾಂಕುಗಳಾದ ಐಸಿಐಸಿಐ, ಹೆಚ್ ಡಿಎಫ್ ಸಿ ಮತ್ತು ಆಕ್ಸಿಸ್ ಬ್ಯಾಂಕುಗಳು ತೆರೆದಿವೆ. ಸರ್ಕಾರದ ಹೂಡಿಕೆ ಯೋಜನೆಯಡಿ ಎರಡು ಸಾರ್ವಜನಿಕ ವಲಯ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸಲಾಗುವುದು ಎಂದು ಕೇಂದ್ರ ಬಜೆಟ್ ಮಂಡನೆ ವೇಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದರು.

ಕೇಂದ್ರ ಸರ್ಕಾರ ಈಗಾಗಲೇ ಐಡಿಬಿಐ ಬ್ಯಾಂಕನ್ನು ಅದರ ಅತಿಹೆಚ್ಚಿನ ಪಾಲಿನ ಷೇರನ್ನು 2019ರಲ್ಲಿ ಎಲ್ ಐಸಿಗೆ ಮಾರಾಟ ಮಾಡುವ ಮೂಲಕ ಖಾಸಗೀಕರಣಗೊಳಿಸಿತ್ತು. ಅಲ್ಲದೆ ಕಳೆದ ನಾಲ್ಕು ವರ್ಷಗಳಲ್ಲಿ 14 ಸಾರ್ವಜನಿಕ ವಲಯ ಬ್ಯಾಂಕುಗಳನ್ನು ಒಟ್ಟು ಮಾಡಿತ್ತು.ಬ್ಯಾಂಕುಗಳ ಶಾಖೆಗಳಲ್ಲಿ ಇಂದು ಮತ್ತು ನಾಳೆಯ ಮುಷ್ಕರದಿಂದ ಚೆಕ್ ಕ್ಲಿಯರೆನ್ಸ್, ಸರ್ಕಾರದ ವಹಿವಾಟುಗಳಿಗೆ ವ್ಯತ್ಯಯವಾಗಲಿದೆ ಎಂದು ಅಖಿಲ ಭಾರತ ಬ್ಯಾಂಕ್ ನೌಕರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸಿ ಎಚ್ ವೆಂಕಟಾಚಲಮ್ ತಿಳಿಸಿದ್ದಾರೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *