ದಾವಣಗೆರೆ: ವಿಧಾನಸೌಧದ ಆವರಣದ ಈಶಾನ್ಯ ಭಾಗದಲ್ಲಿ ಜಗಜ್ಯೋತಿ ಬಸವಣ್ಣ ಪ್ರತಿಮೆ ಸ್ಥಾಪಿಸಲು ಸರ್ಕಾರ ಅನುಮೋದನೆ ನೀಡಿದೆ. ಇದಕ್ಕೆ ಕಾರಣಿಕರ್ತರಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ದಾವಣಗೆರೆ ಸಮಾಜದ ಮುಖಂಡರು ಅಭಿನಂದನೆ ಸಲ್ಲಿಸಿದ್ದಾರೆ.
12ನೇ ಶತಮಾನದಲ್ಲಿ ವಚನ ಕ್ರಾಂತಿಯ ಮೂಲಕ ಸಮಾನತೆ ಮತ್ತು ಸಹಬಾಳ್ವೆ ಸಂದೇಶವನ್ನು ವಿಶ್ವಕ್ಕೆ ನೀಡಿದ ಕರ್ನಾಟಕದ ಹೆಮ್ಮೆಯ ವಿಶ್ವಗುರು ಬಸವಣ್ಣ ಅವರು, ಪ್ರಥಮ ಸಂಸತ್ತಿನ ಕಲ್ಪನೆಯನ್ನು ಪರಿಚಯಿಸಿದರು. ರಕ್ತ ರಹಿತ ಕ್ರಾಂತಿಯ ಮೂಲಕ ಸಮಾನತೆ ಸಮಾಜವನ್ನು ವಿಶ್ವಕ್ಕೆ ಪರಿಚಯಿಸಿ, ಕರ್ನಾಟಕದ ಕಿರ್ತಿಯನ್ನು ವಿಶ್ವ ಮಟ್ಟಕ್ಕೆ ಹೆಚ್ಚಿಸಿದ್ದರು.



