ಬೆಳಗಾವಿ: 2025-26ನೇ ಸಾಲಿನ ಆಯವ್ಯಯ ಘೋಷಣೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ 5,267 ಶಿಕ್ಷಕರು ಹಾಗೂ ರಾಜ್ಯದ ಇತರೆ ಭಾಗದ 5,000 ಹುದ್ದೆಗೆ ದ್ವಿ-ಭಾಷಾ ಮಾಧ್ಯಮ ಭೋಧನೆ ನಿಯಮಾನುಸಾರ ನೇಮಕ ಮಾಡಲು ಆದ್ಯತೆ ನೀಡಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
3.20 ಲಕ್ಷ ರೈತರಿಗೆ 1,250 ಕೋಟಿ ವೆಚ್ಚದ ಕೃಷಿ ಯಂತ್ರೋಪಕರಣ ವಿತರಣೆ; ಕೃಷಿ ಸಚಿವ
ಬೆಳಗಾವಿಯ ಅಧಿವೇಶನದಲ್ಲಿ ಮಾತನಾಡಿ, ಆಂಗ್ಲ ಮಾಧ್ಯಮ ಶಿಕ್ಷಕರ ಇಂಡಕ್ಷನ್ ಕಾರ್ಯಕ್ರಮ ತರಬೇತಿಯು ಸರ್ಕಾರಿ ಶಾಲಾ ಶಿಕ್ಷಕರನ್ನು ಆಂಗ್ಲ ಮಾಧ್ಯಮ ವಿಭಾಗಗಳಿಗೆ ಸಜ್ಜುಗೊಳಿಸಲು ವಿಶೇಷವಾಗಿ ಗ್ರಾಮೀಣ ಹಿನ್ನೆಲೆಯಿಂದ ಬಂದ ವೈವಿದ್ಯಮಯ ಕಲಿಯುವವರಿಗೆ ಆಂಗ್ಲ ಭಾಷಾ ಪ್ರಾವೀಣ್ಯತೆ, ಆತ್ಮವಿಶ್ವಾಸ, ಡಿಜಿಟಲ್ ಕೌಶಲ್ಯಗಳು ಮತ್ತು ಬೋಧನಾ ವಿಧಾನಗಳನ್ನು ರೂಪಿಸುವತ್ತ ಗಮನಹರಿಸಿ, ತರಗತಿಯ ಬೋಧನೆ ಮತ್ತು ಆಂಗ್ಲ ಭಾಷಾ ಕಲಿಕೆಯಲ್ಲಿ ವಿದ್ಯಾರ್ಥಿಗಳ ತೊಡಗಿಸಿಕೊಳ್ಳುವಿಕೆಯನ್ನು ಸುಧಾರಿಸುವ ನಿಟ್ಟಿನಲ್ಲಿ ಮುಂದಿನ ಶೈಕ್ಷಣಿಕ ಸಾಲಿನವರಗೆ ಎಲ್ಲಾ ಶಿಕ್ಷಕರನ್ನು ದ್ವಿ-ಭಾಷಾ ಮಾಧ್ಯಮ ಬೋಧನೆಗೆ ತರಬೇತುಗೊಳಿಸಲು ಯೋಜಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.
2025-26ನೇ ಸಾಲಿನ ಆಯವ್ಯಯ ಘೋಷಣೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ 5267 ಶಿಕ್ಷಕರ ಹುದ್ದೆಗಳಿಗೆ ಹಾಗೂ ರಾಜ್ಯದ ಇತರೆ ಭಾಗದಲ್ಲಿ ಖಾಲಿ ಇರುವ 5000 ಹುದ್ದೆಗಳನ್ನು ನೇಮಕ ಮಾಡಲು ಕ್ರಮ ವಹಿಸಲಾಗಿದ್ದು, ಸದರಿ ಹುದ್ದೆಗಳಲ್ಲಿ ದ್ವಿ-ಭಾಷಾ ಮಾಧ್ಯಮ ಭೋಧನೆಗೆ ಶಿಕ್ಷಕರನ್ನು ನಿಯಮಾನುಸಾರ ನೇಮಕ ಮಾಡಲು ಆದ್ಯತೆ ನೀಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು.



