ಬೆಳಗಾವಿ: ಕಳೆದ ಎರಡೂವರೆ ವರ್ಷಗಳಲ್ಲಿ ರಾಜ್ಯದ 3.20 ಲಕ್ಷ ರೈತರಿಗೆ ಅಂದಾಜು ₹1,250 ಕೋಟಿ ಮೊತ್ತದ ಕೃಷಿ ಯಂತ್ರೋಪಕರಣಗಳನ್ನು ವಿತರಿಸಲಾಗಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.
ವಿದ್ಯುತ್ ಕಳವು, ದುರ್ಬಳಕೆ ಪ್ರಕರಣ ಪತ್ತೆಗೆ ಜಾಗೃತದಳ ರಚನೆ; ಇಂಧನ ಸಚಿವ ಜಾರ್ಜ್
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ಬಸವರಾಜ ನೀಲಪ್ಪ ಶಿವಣ್ಣನವರ್ ಪ್ರಶ್ನೆಗೆ ಉತ್ತರಿಸಿ,ಗ್ರಾಮೀಣ ಪ್ರದೇಶಗಳಲ್ಲಿ ಇತ್ತೀಚೆಗೆ ಕೃಷಿ ಕೂಲಿ ಕಾರ್ಮಿಕರ ಕೊರತೆ ಕಂಡುಬರುತ್ತಿದೆ. ಹೀಗಾಗಿ ರೈತರು ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಯಂತ್ರೋಪಕರಣಗಳನ್ನು ಬಳಸುವ ಕಡೆ ಹೆಚ್ಚಿನ ಆಸಕ್ತಿ ತೋರುತ್ತಿದ್ದಾರೆ. ಹೀಗಾಗಿ ಸರ್ಕಾರವೂ ರೈತರ ಬೇಡಿಕೆಗಳಿಗೆ ಅನುಗುಣವಾಗಿ ಕೃಷಿ ಯಂತ್ರೋಪಕರಣಗಳನ್ನು ವಿತರಿಸುವ ಕೆಲಸಕ್ಕೆ ಆದ್ಯತೆ ನೀಡಿದ ಎಂದರು.
ದಾವಣಗೆರೆ: ಅಡಿಕೆ ದರ ಸ್ಥಿರ | ಇಂದಿನ ಕನಿಷ್ಠ, ಗರಿಷ್ಠ ದರ ಎಷ್ಟಿದೆ..?
ಕಳೆದ ಎರಡೂವರೆ ವರ್ಷಗಳಲ್ಲಿ ರಾಜ್ಯದ 3.20 ಲಕ್ಷ ರೈತರಿಗೆ ಅಂದಾಜು ₹1,250 ಕೋಟಿ ಮೊತ್ತದ ಕೃಷಿ ಯಂತ್ರೋಪಕರಣಗಳನ್ನು ವಿತರಿಸಲಾಗಿದೆ. ಅಲ್ಲದೆ ಹೈಟೆಕ್ ಹಾರ್ವೆಸ್ಟ್ ಹಬ್ ಕಾರ್ಯಕ್ರಮದಡಿ ₹127 ಕೋಟಿ ವೆಚ್ಚದಲ್ಲಿ 348 ರೈತರಿಗೆ ಉಪಯುಕ್ತ ಕೃಷಿ ಯಂತ್ರೋಪಕರಣ ವಿತರಿಸಲಾಗಿದೆ.
ಪ್ರಸಕ್ತ ವರ್ಷ ಕೃಷಿ ಯಂತ್ರೋಪಕರಣಗಳನ್ನು ಸಹಾಯಧನದಡಿ ಒದಗಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರ ಸೇರಿ ಒಟ್ಟು ₹428.82 ಕೋಟಿಗಳ ಅನುದಾನ ಮೀಸಲಿಟ್ಟಿದ್ದು, ಈಗಾಗಲೆ ₹319.57 ಕೋಟಿ ಅನುದಾನ ಜಿಲ್ಲೆಗಳಿಗೆ ಬಿಡುಗಡೆ ಮಾಡಲಾಗಿದೆ. ಈವರೆಗೆ 69,722 ರೈತರಿಗೆ ₹271.71 ಕೋಟಿಗಳ ಸಹಾಯಧನ ಒದಗಿಸಲಾಗಿದೆ. ಕೃಷಿ ಯಂತ್ರೋಪಕರಣಗಳಿಗೆ ಹೆಚ್ಚಿನ ಬೇಡಿಕೆ ಇರುವ ಕಾರಣ ಕೇಂದ್ರ ಸರ್ಕಾರಕ್ಕೂ ಹೆಚ್ಚಿನ ಅನುದಾನ ಒದಗಿಸಲು ಈಗಾಗಲೇ ಮನವಿ ಸಲ್ಲಿಸಲಾಗಿದೆ.



