Connect with us

Dvgsuddi Kannada | online news portal | Kannada news online

ಬಳ್ಳಾರಿಯ ಮೈಲಾರಲಿಂಗೇಶ್ವರ ದರ್ಶನ ಪಡೆದು ಹರಕೆ ತೀರಿಸಿದ ಡಿ.ಕೆ. ಶಿವಕುಮಾರ್

ಪ್ರಮುಖ ಸುದ್ದಿ

ಬಳ್ಳಾರಿಯ ಮೈಲಾರಲಿಂಗೇಶ್ವರ ದರ್ಶನ ಪಡೆದು ಹರಕೆ ತೀರಿಸಿದ ಡಿ.ಕೆ. ಶಿವಕುಮಾರ್

ಬಳ್ಳಾರಿ: ಮೈಲಾರಲಿಂಗೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಬಳ್ಳಾರಿ ಜಿಲ್ಲಾಯ ಹೂವಿನಡಗಲಿ ತಾಲೂಕಿನ ಮೈಲಾರಪುರದ ಮೈಲಾರಲಿಂಗೇಶ್ವರ ದೇವಾಲಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಭಾಗದ ಸಾವಿರಾರು ಜನರ ಹರಕೆ ತೀರಿಸಲು ಹಾಗೂ ದೋಷ ಪರಿಹಾರಕ್ಕಾಗಿ ಮೈಲಾರಲಿಂಗೇಶ್ವರ ಸ್ವಾಮಿ ಸನ್ನಿಧಿಗೆ ಆಗಮಿಸಿ ಪ್ರಾರ್ಥನೆ ಸಲ್ಲಿಸುತ್ತಾರೆ. 2017ರಲ್ಲಿ ಕಾರ್ಣಿಕೋತ್ಸವ ಸಮಯದಲ್ಲಿ ಹೆಲಿಕಾಪ್ಟರ್ ಮೂಲಕ ಬಂದಿದ್ದೆ,  ಆಗ ಈ ದೇವಾಲಯಕ್ಕೆ ಹೆಲಿಕಾಪ್ಟರ್ ನಲ್ಲಿ ಬರುವಂತಿಲ್ಲ. ದೋಷವಾಗಿದೆ ಎಂದು ಇಲ್ಲಿನ ಗುರುಗಳು ತಿಳಿಸಿದರು. ನಮ್ಮ ಕಾರ್ಯಕರ್ತರು ಹರಕೆ ಮಾಡಿಕೊಂಡು ಬೆಳ್ಳಿ ಹೆಲಿಕಾಪ್ಟರ್ ಮಾಡಿಸಿಕೊಂಡು ದೇವಾಲಯಕ್ಕೆ ನೀಡಿದ್ದಾರೆ.

BLY DK SHIVAKUMAR PUJE 8

ಇಲ್ಲಿನ ಸಾವಿರಾರು ಜನ ನನಗಾಗಿ ಪೂಜೆ ಸಲ್ಲಿಸಿ ಹರಕೆ ಕಟ್ಟುಕೊಂಡಿದ್ದಾರೆ. ಹೀಗಾಗಿ ಇಲ್ಲಿಗೆ ಬಂದು ದೇವರಲ್ಲಿ ಕ್ಷಮೆಯಾಚಿಸಿ ರಾಜ್ಯದಲ್ಲಿ ನೆಮ್ಮದಿ ನೆಲೆಸಲಿ ಅಂತಾ ಪ್ರಾರ್ಥಿಸಿದ್ದೇನೆ ಎಂದರು. ಧರ್ಮ ವೈಯಕ್ತಿಕ ವಿಚಾರ, ಅದು ಭಕ್ತ ಹಾಗೂ ಭಗವಂತನ ನಡುವಣ ವಿಚಾರ. ಕೆಲವರು ಮನೆಯಲ್ಲೇ ಪೂಜೆ ಮಾಡಿದರೆ ಮತ್ತೇ ಕೆಲವರು ದೇವಾಲಯಕ್ಕೆ ಬರುತ್ತಾರೆ ಎಂದು ತಿಳಿಸಿಸಿದರು.

BLY DK SHIVAKUMAR PUJE 10

ರಾಜರು, ಪಾಳೆಗಾರರು, ಋಷಿ ಮುನಿಗಳು ದೇವಾಲಯ ಕಟ್ಟಿ ಜನ ನೆಮ್ಮದಿಯಾಗಿ ಪೂಜೆ ಮಾಡಿ ಮಾರ್ಗದರ್ಶನ ಪಡೆಯಲು ಅವಕಾಶ ಕಲ್ಪಿಸಿದ್ದಾರೆ. ನಾವು ಅದನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಹಾಗೂ ಸ್ಥಳೀಯ ಶಾಸಕರಾದ ಪಿ.ಟಿ ಪರಮೇಶ್ವರ್ ನಾಯ್ಕï ಅವರು ಜತೆಗಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top