Connect with us

Dvgsuddi Kannada | online news portal | Kannada news online

ವಿಜಯನಗರ ಜಿಲ್ಲೆ ರಚನೆ ವಿರೋಧಿಸಿ ನ.26ರಂದು ಬಳ್ಳಾರಿ ಬಂದ್ ಗೆ ಕರೆ

ಪ್ರಮುಖ ಸುದ್ದಿ

ವಿಜಯನಗರ ಜಿಲ್ಲೆ ರಚನೆ ವಿರೋಧಿಸಿ ನ.26ರಂದು ಬಳ್ಳಾರಿ ಬಂದ್ ಗೆ ಕರೆ

ಬಳ್ಳಾರಿ: ಬಳ್ಳಾರಿ ಜಿಲ್ಲೆ ವಿಭಜಿಸಿ ನೂರನವಾಗಿ ವಿಜಯನಗರ ಜಿಲ್ಲೆ ರಚನೆ ಮಾಡಲು ಮುಂದಾಗಿರುವ  ರಾಜ್ಯ ಸರ್ಕಾರ,  ಸಚಿವ ಸಂಪುಟ ಸಭೆಯಲ್ಲಿ ಬುಧವಾರ ಅನುಮೋದನೆ ನೀಡಿದೆ. ಇದಕ್ಕೆ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳು ನ.26 ರಂದು  ಬಂದ್ ಗೆ ಕರೆ ನೀಡಿವೆ.

ವಿಜಯನಗರ ಪ್ರತ್ಯೇಕ ಜಿಲ್ಲೆ ವಿರೋಧಿಸಿ ನವೆಂಬರ್ 26ರಂದು ಬಳ್ಳಾರಿ ಬಂದ್ ಮಾಡಲು ಸಮಿತಿ ನಿರ್ಧರಿಸಿದೆ. ಈ ಬಗ್ಗೆ ಸಮಿತಿ ಗುರುವಾರ ಸಭೆ ನಡೆಸಿದ್ದು, ನವೆಂಬರ್ 26ರಂದು ಬಂದ್ ಗೆ ಕೈ ಜೋಡಿಸಲು ಕರೆ ನೀಡಿದೆ.

ಯಾರೋ ಒಬ್ಬರ ಸ್ವಾರ್ಥಕ್ಕಾಗಿ ಬಳ್ಳಾರಿ ಜಿಲ್ಲೆಯನ್ನು ಒಡೆಯಬೇಡಿ. ಸಚಿವ ಆನಂದ ಸಿಂಗ್ ತಮ್ಮ ಸ್ವಾರ್ಥಕ್ಕಾಗಿ ಜಿಲ್ಲೆ ವಿಭಜಿಸಲು ಮುಂದಾಗಿದ್ದಾರೆ. ಹೊಸಪೇಟೆಯಿಂದ ಹಂಪಿಯವರೆಗಿನ ತಮ್ಮ ಭೂಮಿಗೆ ಉತ್ತಮ ಬೆಲೆ ಬರಲಿ ಅನ್ನೋ ಕಾರಣಕ್ಕೆ ಜಿಲ್ಲೆ ರಚನೆಗೆ ಆನಂದ ಸಿಂಗ್ ಮುಂದಾಗಿದ್ದಾರೆ ಎಂದು ಹೋರಾಟ ಸಮಿತಿಯ ಮುಖಂಡ ಕುಡಿತಿನಿ ಶ್ರೀನಿವಾಸ ಆರೋಪಿಸಿದರು.

ದೊಡ್ಡ ಜಿಲ್ಲೆ ವಿಭಜಿಸುವುದಾದ್ರೆ ಮೊದಲು ಬೆಳಗಾವಿ, ತುಮಕೂರು ಜಿಲ್ಲೆಗಳನ್ನು ವಿಭಜಿಸಿ. ಶಾಸಕ ಸೋಮಶೇಖರರೆಡ್ಡಿ ಅವರು ಪ್ರತ್ಯೇಕ ಜಿಲ್ಲಾ ರಚನೆಗೆ ಬೆಂಬಲ ಕೊಡುವುದಿಲ್ಲ ಎಂದಿದ್ದಾರೆ. ರಾಮುಲು ತಮ್ಮ ಸ್ವಾರ್ಥಕ್ಕಾಗಿ ಜಿಲ್ಲೆ ರಚನೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ತಮ್ಮ ತಮ್ಮ  ಸ್ವಾರ್ಥಕ್ಕಾಗಿ ಜಿಲ್ಲೆಯನ್ನು ಒಡೆಯಬೇಡಿ ಎಂದರು. ಸೋಮವಾರ ಬಂದ್ ಮೂಲಕ ಬಳ್ಳಾರಿ ಜಿಲ್ಲಾಧಿಕಾರಿಗಳಿಗೆ ಈ ಕುರಿತಂತೆ ಮನವಿ ಸಲ್ಲಿಸುತ್ತೇವೆ ಎಂದು ತಿಳಿಸಿದರು.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top
(adsbygoogle = window.adsbygoogle || []).push({});