ಬೆಂಗಳೂರು: ಬಾರ್ ಅಂಡ್ ರೆಸ್ಟೋರೆಂಟ್ ಲೈಸೆನ್ಸ್ ಮಂಜೂರು ಮಾಡಲು 15 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟ ಬೇಡಿಕೆಯಿಟ್ಟಿದ್ದ ಅಬಕಾರಿ ಇನ್ಸ್ಪೆಕ್ಟರ್ ಎಸಿಬಿ ಬಲೆಗೆ ಬಿದ್ದಿದ್ದಾರೆ.
11 ಲಕ್ಷ ರೂ. ಹಣ ಮುಂಗಡವಾಗಿ ಪಡೆದು ಬಾಕಿ 4 ಲಕ್ಷಕ್ಕೆ ಇನ್ಸ್ಪೆಕ್ಟರ್ ದುಂಬಾಲು ಬಿದ್ದಿದ್ದರು. ಗುರುವಾರ 4 ಲಕ್ಷ ರೂ. ಲಂಚ ಸ್ವೀಕರಿಸುವಾಗ 1,02,100 ರೂ. ಹೆಚ್ಚುವರಿ ಹಣದ ಸಮೇತ ಮಂಜುನಾಥ್ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದು, ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ.
ಕೆಂಗೇರಿ ವಲಯದ ಅಬಕಾರಿ ಇನ್ಸ್ಪೆಕ್ಟರ್ ಮಂಜುನಾಥ್ ಬಂಧಿತ ಅಧಿಕಾರಿಯಾಗಿದ್ದಾರೆ. ಸಿ.ಎಲ್ 7 ಲೈಸೆನ್ಸ್ಗೆ ಬಾರ್ ಮಾಲೀಕರೊಬ್ಬರು ಅರ್ಜಿ ಸಲ್ಲಿಸಿದ್ದರು. ಅಬಕಾರಿ ಆಯುಕ್ತರು ಪರಿಶೀಲಿಸಿ ಅಬಕಾರಿ ಇನ್ಸ್ಪೆಕ್ಟರ್ಗೆ ಅರ್ಜಿ ವರ್ಗಾಯಿಸಿದ್ದರು. ಇನ್ಸ್ಪೆಕ್ಟರ್ ಮಂಜುನಾಥ್ ಅನುಮತಿ ನೀಡಲು 15 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಬಾರ್ ಮಾಲೀಕ ಅಪರಾಧ ಪತ್ತೆ ದಳದ ಅಧಿಕಾರಿಗಳಿಗೆ ದೂರು ನೀಡಿದ್ದರು.



