ದುಬೈನಿಂದ ಬೆಂಗಳೂರಿಗೆ ಕಳ್ಳಸಾಗಾಣಿಕೆಯಾಗುತ್ತಿದ್ದ 2.8 ಕೆಜಿ ಚಿನ್ನದ ಬಿಸ್ಕತ್‍ ವಶ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು:  ದುಬೈನಿಂದ ಆಗಮಿಸಿದ ವಿಮಾನದಲ್ಲಿ ಕಳ್ಳಸಾಗಾಣಿಕೆಯಾಗುತ್ತಿದ್ದ ಸುಮಾರು 1.37 ಕೋಟಿ ರೂಪಾಯಿ ಮೌಲ್ಯದ 2.8 ಕೆಜಿ  ಚಿನ್ನದ ಬಿಸ್ಕತ್‍ ಗಳನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೇಂದ್ರ ಅಬಕಾರಿ ತೆರಿಗೆ ಅಧಿಕಾರಿಗಳು ವಶ ಪಡಿಸಿಕೊಂಡಿದ್ದಾರೆ.

ದುಬೈನಿಂದ ಮಂಗಳವಾರ ಬೆಳಗ್ಗೆ 10.30ಕ್ಕೆ  ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಇಂಡಿಗೋ 6ಇ096 ವಿಮಾನ ತಪಾಸಣೆಗೊಳಪಡಿಸಿದಾಗ ಅಪಾರ ಪ್ರಮಾಣದ  ಚಿನ್ನ ಪತ್ತೆಯಾಗಿತ್ತು.24 ಚಿನ್ನದ ಸ್ವರೂಪದಲ್ಲಿ 2.8 ಕೆಜಿಯಷ್ಟು ತೂಕದ ಚಿನ್ನವನ್ನು ದುಬೈನಿಂದ ಕಳ್ಳಸಾಗಾಣಿಕೆ ಮೂಲಕ ಸಾಗಿಸಲಾಗುತ್ತಿತ್ತು.

ವಿಮಾನ ನಿಲ್ದಾಣದಲ್ಲಿ ಬಿಗಿ ತಪಾಸಣೆ ಇದಿದ್ದರಿಂದ ಪ್ರಯಾಣಿಕರ ಸೀಟಿನ ಕೆಳಗೆ ಎರಡು ಕಂಬಿಗಳನ್ನು ಹೊಂದಾಣಿಕೆ ಮಾಡಿ ಬ್ಯಾಗ್ ಅನ್ನು ವ್ಯವಸ್ಥಿತವಾಗಿ ಮುಚ್ಚಿಡಲಾಗಿತ್ತು. ಅಧಿಕಾರಿಗಳು ಆ ಕಂಬಿಗಳನ್ನು ಕತ್ತರಿಸಿ ಬೂದು ಬಣ್ಣದ ಬ್ಯಾಗ್‍ನಲ್ಲಿ ಅಡಗಿಸಿಟ್ಟಿದ್ದ ಬ್ಯಾಗ್ ಅನ್ನು ಹೊರ ತೆಗೆದು ಚಿನ್ನ ವಶ ಪಡಿಸಿಕೊಂಡಿದ್ದಾರೆ. ಅಂತರಾಷ್ಟ್ರೀಯ ಮಟ್ಟದ ಕಳ್ಳಸಾಗಾಣಿಕೆದಾರರ ಗುಂಪು ವಿದೇಶಿ ವಿಮಾನಗಳಲ್ಲಿ ವ್ಯವಸ್ಥಿತವಾಗಿ ಚಿನ್ನ ಕಳ್ಳ ಸಾಗಾಣಿಕೆ ಮಾಡುತ್ತಿರುವ ಶಂಕೆ ವ್ಯಕ್ತವಾಗಿದೆ.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *