ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಇಂದು (ಏ.29) ಸಂಜೆ ಏಕಾಏಕಿ ಸುರಿದ ಭಾರೀ ಮಳೆ ದೊಡ್ಡ ಅವಾಂತರ ಸೃಷ್ಠಿಡಿದೆ. ಬಿರುಗಾಳಿ ಸಹಿತ ಸುರಿದ ಮಳೆ ಅಬ್ಬರಿಸಿದೆ ಜನ ಬೆಚ್ಚಿ ಬಿದ್ದಿದೆ. ಬಿಸಿಲಿನಿಂದ ಬೆಂದು ಹೋಗಿದ್ದ ಸಿಟಿ ಮಂದಿಗೆ ವರುಣ ಶಾಕ್ ಕೊಟ್ಟಿದೆ. ಭಾರೀ ಮಳೆಗೆ ನಗರದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು 7 ಮಂದಿ ಸಾವನ್ನಪ್ಪಿದ್ದಾರೆ.
ದಾವಣಗೆರೆ: ಅಡಿಕೆ ದರ ಮತ್ತೆ ಕುಸಿತ; ಇಂದಿನ ಕನಿಷ್ಠ, ಗರಿಷ್ಠ ದರ ಎಷ್ಟು.…?
ನಗರದಲ್ಲಿ ಮಧ್ಯಾಹ್ನದಿಂದಲೇ ಮೋಡ ಕವಿದ ವಾತಾವರಣ ಕಂಡು ಬಂದಿತ್ತು. ಸಂಜೆಯಾಗುತ್ತಿದ್ದಂತೆ ನಗರದ ಹಲವೆಡೆ ವರುಣ ಅಬ್ಬರಿಸಿದ್ದಾನೆ. ಆಲಿಕಲ್ಲು ಸಹಿತ ಮಳೆಯಾಗಿದೆ, ಆಲಿಕಲ್ಲು ಮಳೆ ಕಂಡ ಜನರು ಫುಲ್ ಖುಷ್ ಆಗಿದ್ದರು, ಆದ್ರೆ ಮಳೆ ಹೆಚ್ಚಾಗುತ್ತಿದ್ದಂತೆ ಸಾಲು ಸಾಲು ಅವಾಂತರ ಸೃಷ್ಟಿಯಾಗಿದೆ. ನಗರದ ಹಲವೆಡೆ ಬಿರುಗಾಳಿ ಮಳೆಗೆ ಬೃಹತ್ ಮರಗಳು ನೆಲಕಚ್ಚಿ ಹೋಗಿದೆ. ರಸ್ತೆಗಳಲ್ಲಿ ನೀರು ನಿಂತು, ವಾಹನ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಗಾಳಿಗೆ ಹಲವೆಡೆ ತಗಡು ಶೀಟ್ಗಳು ಹಾರಿ ಹೋಗಿದ್ದು, ಜನರು ಸಮಸ್ಯೆ ಅನುಭವಿಸುವಂತಾಗಿದೆ.
ರಾಜ್ಯದಲ್ಲಿ ಮಳೆ ಮುನ್ಸೂಚನೆ; ಎಲ್ಲೆಲ್ಲಿ ಮಳೆ.?
ಶಿವಾಜಿನಗರದಲ್ಲಿ ಮಳೆಯಿಂದ ಕಾಂಪೌಂಡ್ ಕುಸಿದು 7 ಜನ ಸಾವನ್ನಪ್ಪಿದ ಸುದ್ದಿ ತಿಳಿಯುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿ , ಈ ಘಟನೆ ಅತ್ಯಂತ ನೋವಿನ ವಿಚಾರ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದರು
ಈ ಘೋರ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರದಿಂದ ತಲಾ ರೂ.5 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದರು. ತುರ್ತು ಪರಿಹಾರ ಕಾರ್ಯ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ.
ನಂತರ ಬೌರಿಂಗ್ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕಕ್ಕೆ ಭೇಟಿನೀಡಿ, ಘಟನೆಯಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದೆ. ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡುವಂತೆ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ, ಎಲ್ಲರೂ ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು.



