ದಟ್ಟ ಮಂಜು ಪರಿಣಾಮ ಸರಣಿ ಅಪಘಾತ; ಹಲವರಿಗೆ ಗಾಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು:  ಬೆಳಗ್ಗೆ ದಟ್ಟ ಮಂಜು ಕವಿದ ಪರಿಣಾಮ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ಧಾರಿಯಲ್ಲಿ ಭೀರಕ ಸರಣಿ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಒಂಬತ್ತು ವಾಹನಗಳು ಜಕ್ಕಂಗೊಂಡು, ಹಲವರಿಗೆ  ಗಾಯವಾದ ಘಟನೆ ಟಿ ಬೇಗೂರು ಕ್ರಾಸ್ ಬಳಿ ಸಂಭವಿಸಿದೆ.

ದಟ್ಟ ಮಂಜಿನಿಂದಾಗಿ ಎದುರಿನ ವಾಹನ ಸ್ಪಷ್ಟವಾಗಿ ಕಾಣದ ಹಿನ್ನೆಲೆ ಈ ದುರ್ಘಟನೆ ನಡೆದಿದೆ. ತುಮಕೂರಿನಿಂದ ಬೆಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಕೆಎಸ್‍ಆರ್‍ಟಿಸಿ ಬಸ್ ಚಾಲಕ ದಿಢೀರ್ ಬ್ರೇಕ್ ಹಾಕಿದ್ದಾರೆ.  ಹಿಂದೆ ವೇಗವವಾಗಿ ಚಲಿಸುತ್ತಿದ್ದ  ಲಾರಿ ಬಸ್‍ಗೆ ಡಿಕ್ಕಿ ಹೊಡೆದಿದೆ. ಅದರ ಹಿಂದೆ ಇದ್ದ ಖಾಸಗಿ ಬಸ್, ಕಾರು, ತರಕಾರಿ ಲಾರಿ ಸೇರಿದಂತೆ ಒಂಬತ್ತು ವಾಹನಗಳು  ಒಂದದಕ್ಕೊಂದು ಸರಣಿಯಾಗಿ ಡಿಕ್ಕಿ ಹೊಡೆದುಕೊಂಡಿವೆ.

ಅಪಘಾತದ ರಬಸಕ್ಕೆ ಈರುಳ್ಳಿ ಲಾರಿ ವಿಭಜಕದ ಮೇಲೆರಿ, ಈರುಳ್ಳಿ ಚೆಲ್ಲಾಪಿಲ್ಲಿಯಾಗಿವೆ.  ಇದರಿಂದ ಸಂಚಾರಕ್ಕೆ ಸಂಪೂರ್ಣ ಅಡಚಣೆ ಉಂಟಾಗಿದೆ.  ಇದರಿಂದ ಹಿಂದಿನಿಂದ ಬಂದ ವಾಹನಗಳು ಚಲಿಸಲಾಗದೆ ಸಂಚಾರ ದಟ್ಟಣೆ ಉಂಟಾಯಿತು. ಮುಂಜಾನೆ ಅಪಘಾತ ಸಂಭವಿಸಿದ್ದು, ವಾಹನಗಳನ್ನು ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸಲು ಪೊಲೀಸರು ಬೆಳಗ್ಗೆ 11 ಗಂಟೆಯವರೆಗೂ ಹರಸಾಹಸ ಪಟ್ಟರು. ಕ್ಯಾಂಟರ್ ಡಿಕ್ಕಿಯಿಂದ ವಾಹನ ಚಾಲಕನ ಕಾಲು ಮುರಿದಿದದ್ದು, ಹಲವರಿಗೆ ಗಾಯಗಳಾಗಿವೆ. ನೆಲಮಂಗಲ ಸಂಚಾರ ಪೊಲೀಸರು ಸ್ಥಳಕ್ಕೇ ಭೇಟಿ ನೀಡಿ, ಪ್ರಕರಣ ದಾಖಲಾಗಿದೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *