ಬೆಂಗಳೂರು: ರಾಜ್ಯದ ಐದು ಎಸ್ಕಾಂಗಳ 98 ಪ್ರದೇಶಗಳಲ್ಲಿ ನ.24ರಿಂದ 26ರ ವರೆಗೆ ಆನ್ಲೈನ್ ಆಧಾರಿತ ಸೇವೆ ಸ್ಥಗಿತಗೊಳಿಲಾಗಿದ್ದು, ಬಿಲ್ ಪಾವತಿಸಲು ನಗದು ಕೌಂಟರ್ ಮಾತ್ರ ಓಪನ್ ಇರಲಿದೆ ಎಂದು ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.
ಮಾಹಿತಿ ತಂತ್ರಜ್ಞಾನ ಸೇವೆಗೆ ಸಂಬಂಧಿಸಿದಂತೆ ತಂತ್ರಾಂಶ ಹಾಗೂ ಹಾರ್ಡ್ವೇರ್ ಅಪ್ ಗ್ರೇಡ್ ಮಾಡಬೇಕಿದೆ. ಹೀಗಾಗಿ ಆನ್ಲೈನ್ ಆಧಾರಿತ ಸೇವೆ ಸ್ಥಗಿತಗೊಳಿಸಲಾಗುತ್ತಿದೆ. ಬೆಂಗಳೂರು, ಮೈಸೂರು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ , ಮಂಗಳೂರು, ಕಲಬುರಗಿ ವ್ಯಾಪ್ತಿಯ ನಗರ, ಪಟ್ಟಣ ಪ್ರದೇಶಗಳಲ್ಲಿ ಮೂರು ದಿನ ನಗದು ಪಾವತಿ ಕೌಂಟರ್ಗಳಲ್ಲಿ ಸೇವೆಗಳು ಲಭ್ಯವಿರುವುದಿಲ್ಲ.
ಆನ್ಲೈನ್ ಸೇವೆಗಳಾದ ಹೊಸ ವಿದ್ಯುತ್ ಸಂಪರ್ಕ, ಹೆಸರು-ಲೋಡ್ ಬದಲಾವಣೆ, ನಗದು ಪಾವತಿ, ಆನ್ಲೈನ್ ಮೂಲಕ ವಿದ್ಯುತ್ ಬಿಲ್ ಪಾವತಿಗಳು ಇರುವುದಿಲ್ಲ. ಈ ಅವಧಿಯಲ್ಲಿ ವಿದ್ಯುತ್ ಸರಬರಾಜು ಸೇವೆಗಳಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ.
ಈ ಪ್ರದೇಶದಲ್ಲಿ ಇರಲ್ಲ : ಬೆಸ್ಕಾಂ; ಬೆಂಗಳೂರು ನಗರ, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ-1, ದಾವಣಗೆರೆ-2, ಚಿತ್ರದುರ್ಗ, ತುಮಕೂರು-1, ತುಮಕೂರು-2, ಕ್ಯಾತ್ಸಂದ್ರ, ಶಿರಾ, ಚನ್ನಪಟ್ಟಣ, ಆನೇಕಲ್, ಮುಳಬಾಗಿಲು, ಬಂಗಾರಪೇಟೆ, ಹೊಸಕೋಟೆ, ದೊಡ್ಡಬಳ್ಳಾಪುರ, ಕೆಜಿಎಫ್, ಚಳ್ಳಕೆರೆ, ಹರಪನಹಳ್ಳಿ, ಹರಿಹರ, ಹಿರಿಯೂರು, ತಿಪಟೂರು, ಗೌರಿಬಿದನೂರು.
ಸೆಸ್ಕ್: ಮಳವಳ್ಳಿ, ನಂಜನಗೂಡು, ಮೈಸೂರು, ಮಂಡ್ಯ, ಹುಣಸೂರು, ಚಾಮರಾಜನಗರ, ಕೆ.ಆರ್.ನಗರ, ಅರಸೀಕೆರೆ, ಮಡಿಕೇರಿ, ಕೊಳ್ಳೇಗಾಲ, ಹಾಸನ, ಚನ್ನರಾಯಪಟ್ಟಣ.
ಮೆಸ್ಕಾಂ: ಬಂಟ್ವಾಳ, ಕಡೂರು, ತರೀಕೆರೆ, ಪುತ್ತೂರು, ಉಡುಪಿ, ಮಂಗಳೂರು, ಶಿಕಾರಿಪುರ, ಸಾಗರ, ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರು.
ಜೆಸ್ಕಾಂ: ಮಾನ್ವಿ, ಸಿಂಧನೂರು, ಬೀದರ್, ಗಂಗಾವತಿ, ಕಲಬುರಗಿ, ಸೇಡಂ, ಬಸವಕಲ್ಯಾಣ, ವಾಡಿ, ಶಹಬಾದ್, ಶಹಾಪುರ, ಶಿರಗುಪ್ಪ, ಕಂಪ್ಲಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಹುಮ್ನಾಬಾದ್, ಹೊಸಪೇಟೆ.
ಹೆಸ್ಕಾಂ: ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಾರವಾರ, ನಿಪ್ಪಾಣಿ, ಜಮಖಂಡಿ, ಬೈಲಹೊಂಗಲ, ಲಕ್ಷ್ಮೇಶ್ವರ, ನರಗುಂದ, ರಾಮದುರ್ಗ, ಚಿಕ್ಕೋಡಿ, ಗುಳೇದಗುಡ್ಡ, ಮಹಾಲಿಂಗಪುರ, ಅಥಣಿ, ಭಟ್ಕಳ, ದಾಂಡೇಲಿ, ಇಂಡಿ, ಸವದತ್ತಿ, ಸವಣೂರು, ಶಿರಸಿ, ಬಾಗಲಕೋಟೆ, ರಬಕವಿ-ಬನಹಟ್ಟಿ, ಗದಗ, ಗೋಕಾಕ್, ಹಾವೇರಿ, ಇಳಕಲ್, ರಾಣೆಬೆನ್ನೂರು, ವಿಜಯಪುರ.