ಬೆಂಗಳೂರು: ಕಾರು, ಟ್ರ್ಯಾಕ್ಟರ್, ಮೂರು ಹೆಕ್ಟೇರ್ ಗಿಂತ ಹೆಚ್ವು ಆಸ್ತಿ ಹೊಂದಿದ್ದರೂ ಬಿಪಿಎಲ್ ಕಾರ್ಡ್ ಪಡೆದಿದ್ದವರಿಗೆ ಸರ್ಕಾರ ಶಾಕ್ ನೀಡಿದೆ. ಕೂಡಲೇ ಕಾರ್ಡ್ ಹಿಂತಿರುಗಿಸಲು ಖಡಕ್ ಖಡಕ್ ಸೂಚನೆ ನೀಡಿದ್ದು, ವಾಪಸ್ ನೀಡದಿದ್ದಲ್ಲಿ ದಂಡ ವಿಧಿಸುವ ಎಚ್ಚರಿಕೆ ನೀಡಲಾಗಿದೆ.
ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ (BPL) ಪಡಿತರ ಚೀಟಿ ಹೊಂದಿದ್ದಿದ್ದರೇ, ಅವುಗಳನ್ನು ಕೂಡಲೇ ಆಯಾ ತಾಲೂಕು ಕಚೇರಿಯ ಆಹಾರ ಶಾಖೆಗೆ ಹಿಂದುರುಗಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಒಂದು ವೇಳೆ ವಾಪಸ್ ನೀಡದೆ ಇದ್ದರೆ ಕಾನೂನು ಕ್ರಮದ, ಜೊತೆಗೆ ದಂಡ ಸಹ ವಿಧಿಸಲಿದೆ.
ರಾಜ್ಯ ಸರ್ಕಾರ ಅಂತ್ಯೋದಯ, ಬಿಪಿಎಲ್ ಕಾರ್ಡ್ ಪರಿಷ್ಕರಣಿಗೆ ಮುಂದಾಗಿದ್ದು, ಅಕ್ರಮವಾಗಿ ಪಡಿತರ ಚೀಟಿ ಪಡೆದವರು. ಸರ್ಕಾರದ ಮಾನದಂಡಗಳ ವಿರುದ್ಧವಾಗಿ ಪಡಿತರ ಚೀಟಿ ಹೊಂದಿದವರಿಗೆ ಆಯಾ ತಾಲೂಕುಗಳಲ್ಲಿ ತಹಶಿಲ್ದಾರರು ನೋಟಿಸ್ ಜಾರಿ ಮಾಡಿದ್ದಾರೆ. ಸರ್ಕಾರ ಕಳೆದ ತಿಂಗಳು ಅನರ್ಹ ಪಡಿತರದಾರರ ಪಟ್ಟಿ ಬಿಡುಗಡೆ ಮಾಡಿತ್ತು.
ಯಾರು ಅನರ್ಹರು
- ಸರ್ಕಾರ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು/ಮಂಡಳಿಗಳು/ನಿಗಮಗಳು/ಸ್ವಾಯತ್ತ ಸಂಸ್ಥೆಗಳಿಂದ ವೇತನ ಪಡೆಯುತ್ತಿರುವವರು ಪಡಿತರ ಚೀಟಿ ಹೊಂದಿದವರು
- ಆದಾಯ ತೆರಿಗೆ, ಸೇವಾ ತೆರಿಗೆ, ವ್ಯಾಟ್, ವೃತ್ತಿ ತೆರಿಗೆ ಪಾವತಿಸುವವರು
- ಗ್ರಾಮೀಣ ಪ್ರದೇಶದಲ್ಲಿ ಮೂರು ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು
- ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ, ನಗರ ಪ್ರದೇಶಗಳಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು
- ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರ್ಯಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ, ನಾಲ್ಕು ಚಕ್ರದ ವಾಹನಗಳನ್ನು ಹೊಂದಿರು
- ಕುಟುಂಬದ ವಾರ್ಷಿಕ ಆದಾಯವು ರೂ.1.20 ಲಕ್ಷಗಳಿಗಿಂತಲೂ ಹೆಚ್ಚು ಇರುವರು
- ಸರ್ಕಾರ ನಿಗದಿಪಡಿಸಿರುವ ಈ ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ ಅಥವಾ ಆದ್ಯತಾ (ಬಿಪಿಎಲ್) ಪಡಿತರ ಚೀಟಿ ಹೊಂದಿರುವವರು ತಕ್ಷಣವೆ ತಾಲೂಕು ಕಚೇರಿಯ ಆಹಾರ ಶಾಖೆಗೆ ಪಡಿತರ ಚೀಟಿಯನ್ನು ಒಪ್ಪಿಸುವಂತೆ ಸರ್ಕಾರ ಮಾಧ್ಯಮ ಪ್ರಕಟಣೆ ಹೊಡಿಸಿದೆ.