ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಡಿಸಲಿರುವ ರಾಜ್ಯ ಬಜೆಟ್ ಗೆ ವಿಪಕ್ಷ ಕಾಂಗ್ರೆಸ್ ಶಾಕ್ ನೀಡಿದೆ. ಈ ಬಾರಿಯ ಬಜೆಟ್ ಗೆ ಸಭಾ ತ್ಯಾಗ ಮಾಡುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಇದೊಂದು ನೈತಿಕತೆ ಇಲ್ಲದ ಸರ್ಕಾರ. ಈ ಸರ್ಕಾರ ಅನೈತಿಕತೆಯ ಮೂಟೆ ಹೊತ್ತಿದೆ. ಹೀಗಾಗಿ ಈ ಬಾರಿಯ ಬಜೆಟ್ ಮಂಡನೆಯಿಂದ ಸಭಾ ತ್ಯಾಗ ಮಾಡುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ.



