ಬೆಂಗಳೂರು: 38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 30,000 ಕೋಟಿ ಕೃಷಿ ಸಾಲ ನೀಡುವ ಗುರಿ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿಯ (2026 ಬಜೆಟ್ ತಿಳಿಸಿದ್ದಾರೆ.
2025-26ನೇ ಸಾಲಿನಲ್ಲಿ 37 ಲಕ್ಷ ರೈತರಿಗೆ ₹28,000 ಕೋಟಿ ಸಾಲವನ್ನು ವಿತರಿಸುವ ಗುರಿ ಹೊಂದಲಾಗಿದೆ. ಫೆಬ್ರುವರಿ 2026ರ ಅಂತ್ಯಕ್ಕೆ 25 ಲಕ್ಷ ರೈತರಿಗೆ ₹22,000 ಕೋಟಿ ಕೃಷಿ ಸಾಲವನ್ನು ವಿತರಿಸಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಸಕ್ತ ಸಾಲಿನಲ್ಲಿ 38 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ₹30,000 ಕೋಟಿ ಕೃಷಿ ಸಾಲ ವಿತರಿಸುವ ಗುರಿ ಹೊಂದಲಾಗಿದೆ ಎಂದು ಮಾಹಿತಿ ನೀಡಿದ್ದಾರೆ
ಮುಖ್ಯಮಂತ್ರಿ ಕೃಷಿ ವಿಸ್ತಾರʼ ಯೋಜನೆ
ಕೃಷಿ ಬೆಳೆಗಳ ಮೌಲ್ಯವರ್ಧನೆ ಹಾಗೂ ಕೃಷಿ ತ್ಯಾಜ್ಯ ಮರುಬಳಕೆ ಉತ್ತೇಜಿಸಲು ಮುಂದಿನ ಮೂರು ವರ್ಷಗಳಲ್ಲಿ ʻಮುಖ್ಯಮಂತ್ರಿ ಕೃಷಿ ವಿಸ್ತಾರʼ ಯೋಜನೆ ಜಾರಿಗೆ ₹100 ಕೋಟಿ
ಸಿರಿಧಾನ್ಯ ಮತ್ತು ಸಾವಯವ ಉತ್ಪನ್ನಗಳನ್ನು ಉತ್ತೇಜಿಸಲು ಮಿಲೆಟ್ ಹಬ್ʼ ಏಕಗವಾಕ್ಷಿ ವ್ಯವಸ್ಥೆ
ಪರಿಸರ ಸ್ನೇಹಿ ಮತ್ತು ಸುಸ್ಥಿರ ಕೃಷಿ ಪದ್ಧತಿಗಳನ್ನು ಉತ್ತೇಜಿಸಲು ʻವಸುಧಾಮೃತʼ ಕಾರ್ಯಕ್ರಮ
ಬೆಳೆಗಳಲ್ಲಿ ಕೀಟ ಹಾಗೂ ರೋಗಗಳ ನಿಯಂತ್ರಣಕ್ಕೆ ʻಸಸ್ಯ ಸಂಜೀವಿನಿʼ ಯೋಜನೆ
ರೈತ ಕರೆ ಕೇಂದ್ರವನ್ನು AI ತಂತ್ರಜ್ಞಾನದಿಂದ ಉನ್ನತೀಕರಣ
ಚಿತ್ರದುರ್ಗದ ಬಬ್ಬೂರಿನ ಜಿಲ್ಲಾ ಕೃಷಿ ತರಬೇತಿ ಕೇಂದ್ರವನ್ನು ರಾಜ್ಯಮಟ್ಟದ ʻಕೃಷಿ ಉದ್ದಿಮೆ ಕೇಂದ್ರʼವನ್ನಾಗಿ ಉನ್ನತೀಕರಣ
ಕೋಲಾರ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ MSIL ವತಿಯಿಂದ ರೈತ ಮಾಲ್ಗಳ ಸ್ಥಾಪನೆ
ತೋಟಗಾರಿಕೆ ಆಧಾರಿತ ಕೈಗಾರಿಕೆಗಳ ಸ್ಥಾಪನೆ
ತೋಟಗಾರಿಕಾ ಇಲಾಖೆಯ ಕ್ಷೇತ್ರಗಳಲ್ಲಿ ಮತ್ತು ನರ್ಸರಿಗಳಲ್ಲಿ PPP ಮಾದರಿಯಲ್ಲಿ ತೋಟಗಾರಿಕೆ ಆಧಾರಿತ ಕೈಗಾರಿಕೆಗಳ ಸ್ಥಾಪನೆ
ತೋಟಗಾರಿಕೆ ಉತ್ಪನ್ನಗಳಿಗಾಗಿ 64 ಕೋಟಿ ರೂ.ಗಳಲ್ಲಿ 12,000 ಮೆಟ್ರಿಕ್ ಟನ್ ಸಾಮರ್ಥ್ಯದ ಎರಡು ಶೀತಲಗೃಹಗಳ ನಿರ್ಮಾಣ
ಮೈಸೂರಿನ ಲಿಂಗಾಂಬುಧಿ ಸಸ್ಯತೋಟದ ಸಮಗ್ರ ಅಭಿವೃದ್ಧಿ
ನೀರಿನ ಸಂರಕ್ಷಣೆ ಮತ್ತು ರೋಗಗಳನ್ನು ತಡೆಗಟ್ಟಲು ಮಣ್ಣಿಲ್ಲದ ಕೃಷಿಗೆ ಪ್ರೋತ್ಸಾಹ



