ಬೆಂಗಳೂರು: ಮಾರ್ಚ್ 8ರಂದು ರಾಜ್ಯ ಬಜೆಟ್ ಮಂಡನೆಯಾಗಲಿದ್ದು, ಸಿಎಂ ಯಡಿಯೂರಪ್ಪ ಇಂದು ಇಲಾಖೆವಾರು ಪೂರ್ವಭಾವಿ ಸಭೆ ನಡೆಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲಾಖೆಗಳ ಬಜೆಟ್ ಪೂರ್ವಭಾವಿ ಸಭೆ ನಡೆಸಲಾಗಿದೆ. ಸಭೆ ಬಳಿಕ ಬಜೆಟ್ ಸಿದ್ದತೆ ಶುರುವಾಗುತ್ತದೆ.ಏನೇನು ಕೊಡಬಹುದು, ಎಷ್ಟೆಷ್ಟು ಖರ್ಚಾಗಿದೆ ಎನ್ನುವುದರರ ಬಗ್ಗೆ ಚರ್ಚೆ ಮಾಡಿದ್ದೇವೆ. ಬಹಳ ಉಪಯುಕ್ತವಾದ ಸಭೆಯಾಗಿದೆ ಎಂದರು.
ಹಣಕಾಸು ಇಲಾಖೆ ಅಧಿಕಾರಿ ಗಳ ಜೊತೆ ಚರ್ಚೆ ಮಾಡ್ತಿದ್ದೇವೆ. ಬಜೆಟ್ ಸಿದ್ದತೆ ಕೂಡ ಒಂದು ರೂಪಕ್ಕೆ ಬರುತ್ತಿದೆ. ವಿವಿಧ ಸಮುದಾಯಗಳಿಂದ ಮೀಸಲಾತಿಗೆ ಬೇಡಿಕೆ ವಿಚಾರವಾಗಿ ಮಾತನಾಡಿದ ಅವರು, ಈಗಾಗಲೇ ಈ ಬಗ್ಗೆ ಕ್ಯಾಬಿನೆಟ್ ಸಭೆಯಲ್ಲಿ ಸ್ಪಷ್ಟ ಮಾಡಿದ್ದೇನೆ. ಪ್ರತಿಯೊಬ್ಬ ಸಚಿವರು ಕೂಡ ಅವರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮುಂದೆ ಯಾವ ರೀತಿ ಮಾಡಬೇಕು ಎಂಬುದರ ಬಗ್ಗೆ ಚರ್ಚೆ ಆಗುತ್ತಿದೆ ಎಂದು ಹೇಳಿದರು.



