Connect with us

Dvgsuddi Kannada | online news portal | Kannada news online

7ನೇ ವೇತನ ಆಯೋಗ ಜಾರಿ ಖಚಿತ; ಈ ವರ್ಷವೇ ಆಯೋಗದ ವರದಿ ಅನುಷ್ಠಾನ: ಬಜೆಟ್ ಮಂಡನೆ ಬಳಿಕ ಸಿಎಂ ಹೇಳಿಕೆ

ಪ್ರಮುಖ ಸುದ್ದಿ

7ನೇ ವೇತನ ಆಯೋಗ ಜಾರಿ ಖಚಿತ; ಈ ವರ್ಷವೇ ಆಯೋಗದ ವರದಿ ಅನುಷ್ಠಾನ: ಬಜೆಟ್ ಮಂಡನೆ ಬಳಿಕ ಸಿಎಂ ಹೇಳಿಕೆ

ಬೆಂಗಳೂರು: 7 ನೇ ವೇತನ ಆಯೋಗದ ಬಗ್ಗೆ ಬಜೆಟ್ ನಲ್ಲಿ ಪ್ರಸ್ತಾಪಿಸದಕ್ಕೆ  ಸರ್ಕಾರಿ ನೌಕರರ ಸಂಘ ತೀವ್ರ ಬೇಸರ ವ್ಯಕ್ತಪಡಿಸಿದ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆ ಕುರಿತ ಮಾತನಾಡಿದ್ದಾರೆ. ಬಜೆಟ್ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 7ನೇ ವೇತನ ಆಯೋಗ ಜಾರಿ ಖಚಿತವಾಗಿದ್ದು, ಈ ವರ್ಷವೇ 7ನೇ ವೇತನ ಆಯೋಗದ ವರದಿ ಅನುಷ್ಠಾನಕ್ಕೆ ಬರಲಿದೆ ಎಂದು ಭರವಸೆ ನೀಡಿದರು.

ಏಳನೇ ವೇತನ ಆಯೋಗದ ಅನುಷ್ಠಾನದ ಕುರಿತು ಬಜೆಟ್​​ನಲ್ಲಿ ಆ ಬಗ್ಗೆ ಪ್ರಸ್ತಾಪಿಸಿಲ್ಲ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ತೀವ್ರ ಬೇಸರ ವ್ಯಕ್ತಪಡಿಸಿದ್ದರು. ಇದಕ್ಕೆ  ಸಿಎಂ ಪ್ರತಿಕ್ರಿಯಿಸಿದ್ದು, ಏಳನೇ ವೇತನ ಆಯೋಗದ ವರದಿ ಶೀಘ್ರವೇ ಬರಲಿದೆ. ಈ ವರ್ಷದ ಬಜೆಟ್‌ನಲ್ಲಿ‌ 6 ಸಾವಿರ ಕೋಟಿ ರೂ. ಮೀಸಲಿಟ್ಟಿದ್ದು, ಈ ವರ್ಷವೇ 7ನೇ ವೇತನ ಆಯೋಗದ ವರದಿ ಅನುಷ್ಠಾನ ಮಾಡುತ್ತೇವೆ.  ಚುನಾವಣೆ ಇದೆ ಎಂದು ನಾನು ಕೂಡ ಬೇಜಾವಾಬ್ದಾರಿಯಿಂದ ಘೋಷಣೆಗಳನ್ನು ಮಾಡಬಹುದಿತ್ತು. ಮಹಿಳೆಯರಿಗೆ ಇಷ್ಟು ಕೊಡುತ್ತೇವೆ, ಅಷ್ಟು ಕೊಡುತ್ತೇವೆ ಎಂದೂ ಹೇಳಬಹುದಿತ್ತು. ಆದರೆ ‌ ನಮ್ಮದು‌ ಜವಾಬ್ದಾರಿಯುತ ಸರ್ಕಾರ ಎಂದರು.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top