Connect with us

Dvgsuddi Kannada | online news portal | Kannada news online

ರಾಜ್ಯ ಬಜೆಟ್; ದಾವಣಗೆರೆ ಜಿಲ್ಲೆಗೆ ಸಿಕ್ಕಿದ್ದೇನು? ಬಜೆಟ್ ಬಗ್ಗೆ ಶಾಮನೂರು ಶಿವಶಂಕರಪ್ಪ, ಎಸ್.ಎಸ್.ಮಲ್ಲಿಕಾರ್ಜುನ್ ಏನು ಹೇಳಿದ್ರು..?

shamnur shivashanrappa siddramaih

ದಾವಣಗೆರೆ

ರಾಜ್ಯ ಬಜೆಟ್; ದಾವಣಗೆರೆ ಜಿಲ್ಲೆಗೆ ಸಿಕ್ಕಿದ್ದೇನು? ಬಜೆಟ್ ಬಗ್ಗೆ ಶಾಮನೂರು ಶಿವಶಂಕರಪ್ಪ, ಎಸ್.ಎಸ್.ಮಲ್ಲಿಕಾರ್ಜುನ್ ಏನು ಹೇಳಿದ್ರು..?

ದಾವಣಗೆರೆ: ಸರ್ಕಾರ ಪ್ರಣಾಳಿಕೆಯಲ್ಲಿ ಕೊಟ್ಟ ಮಾತನ್ನು ಬಜೆಟ್  ನಲ್ಲಿ ಅನುದಾನ ಹಂಚಿಕೆ ಮೂಲಕ ಉಳಿಸಿಕೊಂಡಿದ್ದೇವೆ ಎಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸಂಸದೆ ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದ್ದಾರೆ.

4 ಲಕ್ಷ ಕೋಟಿ ದಾಟಿದ ರಾಜ್ಯ ಬಜೆಟ್; ಯಾವ ಇಲಾಖೆಗೆ ಎಷ್ಟು ಅನುದಾನ..?

ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಾಖಲೆಯ 16ನೇ ಬಜೆಟ್ ಸಮೃದ್ಧಿಯ ಪ್ರತೀಕವಾಗಿದೆ ಎಂದು ಅಭಿಪ್ರಾಯಪಟ್ಟಿದ್ದು, ಬಿಜೆಪಿಯವರಿಗೆ ನಾಚಿಕೆಯಾಗಬೇಕು. ನಾವು ಕೊಟ್ಟ ಮಾತುಗಳನ್ನು ಉಳಿಸಿಕೊಂಡಿದ್ದೇವೆ. ಅವರ ಕಾಲದ ಬಜೆಟ್ ರೀತಿ ನಮ್ಮದು ಇರುವುದಿಲ್ಲ. ಕೇಂದ್ರ ಬಜೆಟ್‍ನಲ್ಲಿ ಕರ್ನಾಟಕಕ್ಕೆ ಏನೂ ಕೊಡುಗೆ ನೀಡಿಲ್ಲ. ಕರ್ನಾಟಕ ಉಳಿಸಿ ಎಂದು ಹೇಳುವುದಕ್ಕೆ ಅವರಿಗೆ ನೈತಿಕತೆಯಿಲ್ಲ. ನಾವು ನಮ್ಮ ಜನರನ್ನು ಕಾಪಾಡುತ್ತೇವೆ, ಕಾಪಾಡಿದ್ದೇವೆ” ಎಂದದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಸ್ಲಿಂ ಸಮುದಾಯಕ್ಕೆ ಬಂಪರ್ ಕೊಡುಗೆ; ಹಲಾಲ್ ಬಜೆಟ್ ಎಂದು ಬಿಜೆಪಿ ಕಿಡಿ

ದಾವಣಗೆರೆ ಜಿಲ್ಲಾ ಆಸ್ಪತ್ರೆ ಸೇರಿದಂತೆ ಇತರೆ ಜಿಲ್ಲೆಗಳ ಒಟ್ಟು 08 ತಾಲ್ಲೂಕು ಆಸ್ಪತ್ರೆಗಳನ್ನು 650 ಕೋಟಿ ರೂ ವೆಚ್ಚದಲ್ಲಿ ನವೀಕರಣ ಮಾಡಲಾಗಿದೆ ಇದು ಉತ್ತಮವಾಗಿದೆ. ಬಂಜಾರ ಸಮುದಾಯದ ಪ್ರಮುಖ ಧಾರ್ಮಿಕ ಸ್ಥಳವಾದ ದಾವಣಗೆರೆ ಜಿಲ್ಲೆಯ ಸಂತ ಸೇವಾಲಾಲ್ ಪುಣ್ಯಕ್ಷೇತ್ರವಾದ ಸೂರಗೊಂಡನ ಕೊಪ್ಪದಲ್ಲಿ ಒಂದು ವಸತಿ ಶಾಲೆಯನ್ನು ಕೈಸ್ ವತಿಯಿಂದ ಪ್ರಾರಂಭಿಸಲಾಗುತ್ತಿದೆ.

ರೈತರ ಜಮೀನಿನ ರಸ್ತೆ ಅಭಿವೃದ್ಧಿಗೆ ಕೃಷಿ ಪಥ ಯೋಜನೆ ಘೋಷಣೆ; ಮಣ್ಣಿನ ಸಂರಕ್ಷಣೆಗೆ ಕೃಷಿ ಕವಚ

ದಾವಣಗೆರೆಯ ಕೊಂಡಜ್ಜಿಯ ಪರಿಸರದಲ್ಲಿ ಸ್ಥಾಪಿಸಲಾಗಿರುವ ವೃತ್ತಿರಂಗಭೂಮಿ ರಂಗಾಯಣದಲ್ಲಿ ಮೂಲಭೂತ ಸೌಕರ್ಯ, ವೃತ್ತಿ ‘ರಂಗಾಯಣ ಸಮುಚ್ಛಯ ಹಾಗೂ ಥಿಯೇಟರ್ ಮ್ಯೂಸಿಯಂ ನಿರ್ಮಾಣಕ್ಕೆ ಸಿದ್ದರಾಮಯ್ಯನವರು ಬಜೆಟ್ನಲ್ಲಿ 3.00 ಕೋಟಿ ರೂ ತೆಗೆದಿರಿಸಿರುವುದು ಸ್ವಾಗತಾರ್ಹವೆಂದರು.

ಜಗಳೂರು ಕೆರೆ ತುಂಬಿಸುವ ಯೋಜನೆ, ಹೊನ್ನಾಳಿಯ ಬೆನಕನಹಳ್ಳಿ ಗೋವಿನಕೋವಿ ಮತ್ತು ಹನುಮಸಾಗರ ಕೆರೆ ತುಂಬಿಸುವ ಯೋಜನೆಗೆ ಅನುದಾನ ತೆಗೆದಿರಿಸಿರುವುದು ಹಾಗೂ ರಾಜ್ಯ ಸರ್ಕಾರವು ರೈಲ್ವೆ ಸಹಯೋಗದೊಂದಿಗೆ ತುಮಕೂರು-ದಾವಣಗೆರೆ ಸೇರಿದಂತೆ 9 ವಿವಿಧ ರೈಲ್ವೇ ಯೋಜನೆಗಳಿಗೆ ಮಂಜೂರಾತಿ ನೀಡಿರುವುದು ನೋಡಿದರೆ ರಾಜ್ಯ ಮತ್ತು ಜಿಲ್ಲೆಯನ್ನು ಸಮೃದ್ಧಿಗೆ ತೆಗೆದುಕೊಂಡು ಹೋಗುತ್ತಿರುವುದು ಕಾಣಬಹುದು ಎಂದು ಅವರುಗಳು ತಿಳಿಸಿದ್ದಾರೆ.

ಪ್ರಸಕ್ತ ವರ್ಷದಿಂದ ದಾವಣಗೆರೆ ಕೇಂದ್ರ ವಲಯದಲ್ಲಿ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳಗಳನ್ನು ಸ್ಥಾಪನೆ, ದಾವಣಗೆರೆ ಜಿಲ್ಲೆ ವಿದ್ಯುನ್ಮಾನ ಕ್ಯಾಮರಾ ಅಳವಡಿಕೆಗೆ ಮಂಜೂರಾತಿ ದೊರೆತಿದೆ ಎಂದು ತಿಳಿಸಿದ್ದಾರೆ.

ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಲು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ರಾಜ್ಯದ 31 ಜಿಲ್ಲೆಗಳಲ್ಲಿ 06 ನೇ ತರಗತಿಯಿಂದ 12ನೇ ತರಗತಿಯವರೆಗಿನ ವಸತಿ ಶಾಲೆಗಳ ನಿರ್ಮಾಣ, ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕಿಯರಿಗೆ ಹಾಗೂ ಬಿಸಿಯೂಟ ಕಾರ್ಯಕರ್ತರಿಗೆ ವೇತನ ಹೆಚ್ಚಳ, ನಿವೃತ್ತ ಪತ್ರಕರ್ತರಿಗೆ ಗೌರವ ಸಂಭಾವನೆ ಹೆಚ್ಚಳ, ಪತ್ರಕರ್ತರಿಗೆ ಆರೋಗ್ಯ ಸಂಜೀವಿನಿ ಯೋಜನೆ ಸೇರಿದಂತೆ ಹೀಗೆ ಎಲ್ಲಾ ವಲಯಕ್ಕೂ ಈ ಬಜೆಟ್ ಪೂರಕವಾಗಿ ಸ್ಪಂದಿಸಿದೆ ಎಂದಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top