ಕಿವಿಗೆ ಚೆಂಡು ಹೂ ಇಟ್ಟುಕೊಂಡು ಬಜೆಟ್ ಆಲಿಸಿದ ಡಿಕೆಶಿ, ಸಿದ್ದರಾಮಯ್ಯ;  ಧಮ್ ಇಲ್ಲದ ಬಜೆಟ್ ಎಂದು ಟೀಕೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ಕಿವಿಗೆ ಚೆಂಡು ಹೂ ಇಟ್ಟುಕೊಂಡು ಬಜೆಟ್ ಆಲಿಸಿದ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಡಿಕೆ ಶಿವಕುಮಾರ, ಇದೊಂದು  ಧಮ್ ಇಲ್ಲದ ಬಜೆಟ್ ಎಂದು ಟೀಕಿಸಿದ್ದಾರೆ.

ಕಳೆದ ಬಾರಿ ಮಂಡಿಸಿದ್ದ ಬಜೆಟ್​ನಲ್ಲಿ ಏನು ಮಾಡಿದ್ರಿ ಎಂದು ಕೇಳಿದ್ದೆವು. ಈ ಪ್ರಶ್ನೆಗೆ ಇನ್ನೂ ಉತ್ತರ ಬಂದಿಲ್ಲ. 90% ಆಶ್ವಾಸನೆಯನ್ನು ಈವರೆಗೆ ಈಡೇರಿಸಿಲ್ಲ. ಜನರ ಕಿವಿಗೆ ಚೆಂಡು ಹೂ ಇಟ್ಟಿದ್ದಾರೆ. ಇದು ಇದು ಬಿಸಿಲ‌ ಕುದುರೆ ಬಜೆಟ್ ಎಂದು ಕೆಪಿಸಿಸಿ ರಾಜ್ಯಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.  ಸಿಎಂ ಬೊಮ್ಮಾಯಿ ಮಂಡಿಸಿರುವ ರಾಜ್ಯ ಬಜೆಟ್ ಪ್ರತಿಕ್ರಿಯಿಸಿದ ಡಿಕೆಶಿ, ಜಿಎಸ್‌ಟಿ‌ ಹಣದಲ್ಲಿ 15% ಹಣ ಕೂಡ‌ ರಾಜ್ಯಕ್ಕೆ ಬರುವುದಿಲ್ಲ. ಈ‌ ಬಾರಿಯ ಬಜೆಟ್​ನ್ನು ಜಾತ್ರೆಯ ಕನ್ನಡಕ‌ ಹಾಕಿಕೊಂಡು ನೋಡಬೇಕು. ಧಮ್ ಧೈರ್ಯ ಅಂತ ಭಾಷ‌ಣ ಮಾಡುವ ಸಿಎಂ ಭಾಷಣದಲ್ಲಿ ಧಮ್ ಇರಲಿಲ್ಲ ಎಂದು ಕಿಡಿಕಾರಿದರು.

ಬೊಮ್ಮಾಯಿ ಅವರು ಬಿಜೆಪಿ ಎಂಎಲ್​ಎ‌ ಕ್ಷೇತ್ರಗಳಿಗೆ ಬಜೆಟ್​ನಲ್ಲಿ ಹೆಚ್ಚಿನ ಪ್ರಾಶಸ್ತ್ಯ ಕೊಟ್ಟಿದ್ದಾರೆ. ಮಹಾದಾಯಿ, ಕೃಷ್ಣಾಗೆ ಯಾವುದೇ ವಿಶೇಷ ಕೊಡುಗೆ ನೀಡಿಲ್ಲ. ಈ ಮೂಲಕ ಡಬಲ್ ಇಂಜಿನ್ ಆಫ್ ಆಗಿದೆ. ಮನೆಯ ಶೋಕೇಸ್​​ನಲ್ಲಿ ಪ್ರದರ್ಶನಕ್ಕೆ ಇಟ್ಟುವಂತಹ ಬಜೆಟ್ ಇದಾಗಿದೆ. ಈ ಬಜೆಟ್​​ನಿಂದ ಕಾಂಗ್ರೆಸ್​ಗೆ ಇನ್ನಷ್ಟು ಶಕ್ತಿ ಬರಲಿದೆ ಎಂದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *