ಬೆಂಗಳೂರು: ರಾಜ್ಯದಲ್ಲಿ 2 ವಿಧಾನ ಸಭಾ ಮತ್ತು1 ಲೋಕ ಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಏಪ್ರಿಲ್ 17 ರಂದು ಚುನಾವಣೆ ನಡೆಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ.
ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಸುರೇಶ್ ಅಂಗಡಿ, ಬಸವ ಕಲ್ಯಾಣ ವಿಧಾನ ಸಭಾ ಕ್ಷೆತ್ರದಿಂದ ಆಯ್ಕೆಯಾಗಿದ್ದ ಬಿ. ನಾರಾಯಣ ರಾವ್ ಅವರ ನಿಧನದಿಂದ ಚುನಾವಣೆ ನಡೆಯುತ್ತಿದೆ. ಇನ್ನು ಮಸ್ಕಿ ವಿಧಾನ ಸಭಾ ಕ್ಷೇತ್ರಿಂದ ಪ್ರತಾಪ್ ಗೌಡ ಪಾಟೀಲ್ ಅವರ ರಾಜೀನಾಮೆಯಿಂದ ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಕೆಗೆ ಮಾರ್ಚ್ 31 ಕೊನೆಯ ದಿನವಾಗಿದೆ. ಇನ್ನು ಈ ಚುನಾವಣೆಯ ಫಲಿತಾಂಶ ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ.



