Connect with us

Dvgsuddi Kannada | online news portal | Kannada news online

ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರು ಉಪಚುನಾವಣೆ ಡೇಟ್ ಫಿಕ್ಸ್; ನ.13 ಮತದಾನ- ನ.23ರಂದು ಮತ ಎಣಿಕೆ

Election Commission

ಪ್ರಮುಖ ಸುದ್ದಿ

ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರು ಉಪಚುನಾವಣೆ ಡೇಟ್ ಫಿಕ್ಸ್; ನ.13 ಮತದಾನ- ನ.23ರಂದು ಮತ ಎಣಿಕೆ

ನವದೆಹಲಿ: ಭಾರತದ ಚುನಾವಣಾ ಆಯೋಗವು ರಾಜ್ಯದ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಕ್ಷೇತ್ರಗಳಗಳ ಉಪ ಚುನಾವಣೆ ದಿನಾಂಕ ಘೋಷಣೆ ಮಾಡಿದೆ‌. ಈ ಮೂರೂ ಕ್ಷೇತ್ರಗಳಲ್ಲಿ ನವೆಂಬರ್‌ 13 ರಂದು ಮತದಾನ ನಡೆಯಲಿದ್ದು, ನವೆಂಬರ್‌ 23ರಂದು ಮತ ಎಣಿಕೆ ನಡೆಯಲಿದೆ.

ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ, ಗೆದ್ದ ನಂತರ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು.ಅದೇ ರೀತಿ ಮಾಜಿ ಸಿಎಂ ಬಸವರಾಜ್‌ ಬೊಮ್ಮಾಯಿ ಶಿಗ್ಗಾವಿ ಕ್ಷೇತ್ರ ಹಾಗೂ ಇ. ತುಕಾರಾಂ ಸಂಡೂರು ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಈ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ.

ಬಸವರಾಜ್ ಬೊಮ್ಮಾಯಿ ಹಾವೇರಿ‌ ಲೋಕಸಭಭೆ, ಹೆಚ್ ಡಿ ಕುಮಾರಸ್ವಾಮಿ ಮಂಡ್ಯ ಕ್ಲೋಕಸಭೆಗೆ ಹಾಗೂ ಇ. ತುಕಾರಾಂ ಬಳ್ಳಾರಿ ಲೋಕಸಭೆ ಪ್ರವೇಶಿಸಿದ್ದಾರೆ.

ಕೇರಳದ 47 ವಿಧಾನಸಭಾ ಸ್ಥಾನ ಹಾಗೂ ಒಂದು ಲೋಕಸಭಾ ಸ್ಥಾನಕ್ಕೆ ನವೆಂಬರ್‌ 13 ರಂದು ಮತದಾನ ನಡೆಯಲಿದೆ. ಉತ್ತರಾಖಂಡದ ಒಂದು ವಿಧಾನಸಭಾ ಸ್ಥಾನ ಹಾಗೂ ಮಹಾರಾಷ್ಟ್ರದ ಒಂದು ಲೋಕಸಭಾ ಸ್ಥಾನಕ್ಕೆ ನವೆಂಬರ್‌ 20 ರಂದು ಮತದಾನ ನಡೆಯಲಿದೆ. ಎಲ್ಲಾ ಚುನಾವಣೆಗಳ ಫಲಿತಾಂಶ ನವೆಂಬರ್‌ 23 ರಂದು ಪ್ರಕಟವಾಗಲಿದೆ.

jagalur lake 1

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top