Connect with us

Dvgsuddi Kannada | online news portal | Kannada news online

ಸಚಿವ ಸ್ಥಾನದ ಆಕಾಕ್ಷಿಗಳಿಗೆ ಮತ್ತೆ ನಿರಾಸೆ ;  ವಿಸ್ತರಣೆ ಬಗ್ಗೆ ಎರಡ್ಮೂರು ದಿನಗಳಲ್ಲಿ ಹೈಕಮಾಂಡ್ ನಿರ್ಧಾರ: ಸಿಎಂ

ಪ್ರಮುಖ ಸುದ್ದಿ

ಸಚಿವ ಸ್ಥಾನದ ಆಕಾಕ್ಷಿಗಳಿಗೆ ಮತ್ತೆ ನಿರಾಸೆ ;  ವಿಸ್ತರಣೆ ಬಗ್ಗೆ ಎರಡ್ಮೂರು ದಿನಗಳಲ್ಲಿ ಹೈಕಮಾಂಡ್ ನಿರ್ಧಾರ: ಸಿಎಂ

ನವದೆಹಲಿ: ಇಂದು ಸಂಜೆ ವೇಳೆಗೆ ಹೈಕಮಾಂಡ್ ನಿಂದ  ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಸಿಗುವ ವಿಶ್ವಾಸದಲ್ಲಿ ದೆಹಲಿಯತ್ತ ಪ್ರಯಾಣಿಸಿದ್ದ ಸಿಎಂ ಯಡಿಯೂರಪ್ಪಗೆ ನಿರಾಸೆಯಾಗಿದೆ. ಇನ್ನು ಸಚಿವ ಸ್ಥಾನದ ಆಕಾಂಕ್ಷಿಗಳು  ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಸಿಎಂ ಏನು ಹೇಳ್ತಾರೆ ಎಂದು ಕಾದು ಕುಳಿತಿದ್ದರು. ಆದರೆ, ಹೈಕಮಾಂಡ್ ಸಂಪುಟ ವಿಸ್ತರಣೆಗೆ ಇನ್ನು ಗ್ರೀನ್ ಸಿಗ್ನಲ್ ನೀಡಿಲ್ಲ. ಇನ್ನು  ಎರಡ್ಮೂರು ದಿನಗಳಲ್ಲಿ ಹೈಕಮಾಂಡ್  ಅಂತಿಮ ತೀರ್ಮಾನ ಪ್ರಕಟಿಸಲಿದೆ ಸಿಎಂ ಯಡಿಯೂರಪ್ಪ  ಹೇಳಿದ್ದು,  ಸಚಿವಾಕಾಂಕ್ಷಿಗಳಿಗೆ ಮತ್ತೆ ನಿರಾಸೆಯಾಗಿದೆ.

ಜೆ.ಪಿ.ನಡ್ಡಾ ಭೇಟಿಯಾಗಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಿದ ಸಿಎಂ ಬಿ.ಎಸ್.ಯಡಿಯೂರಪ್ಪ ಸುದ್ದಿಗಾರರೊಂದಿಗೆ ಮಾತನಾಡಿ, ವರಿಷ್ಠರು ಚರ್ಚೆ ನಡೆಸಿ ಸಂಪುಟ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ. ಜೆ.ಪಿ.ನಡ್ಡಾ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ ಎಂದರು.

ಇನ್ನು ಎರಡು ಮೂರು ದಿನಗಳಲ್ಲಿ ವರಿಷ್ಠರು ತಮ್ಮ ನಿರ್ಧಾರ ತಿಳಿಸುತ್ತಾರೆ. ಸಂಪುಟ ವಿಸ್ತರಣೆಯೋ, ಪುನಾರಚನೆಯೋ ಎಂಬುದನ್ನು ವರಿಷ್ಠರೇ ನಿರ್ಧರಿಸಲಿದ್ದಾರೆ ಎಂದು ಹೇಳಿದರು. ಈ ಮೂಲಕ ಸಚಿವಾಕಾಂಕ್ಷಿಗಳ ಎದೆಯಲ್ಲಿ ಮತ್ತೆ ನಡುಕ ಉಂಟಾಗಿದೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top