Connect with us

Dvgsuddi Kannada | online news portal | Kannada news online

ಫೆ.12 ರಿಂದ ಫೆ.23ರವರೆಗೆ ವಿಧಾನಮಂಡಲ ಅಧಿವೇಶನ; ಕರ್ನಾಟಕ ಸಾಂಸ್ಕೃತಿಕ ನಾಯಕರಾಗಿ ಬಸವಣ್ಣ ಹೆಸರು‌ ಘೋಷಿಸಿದ ಸರ್ಕಾರ…!!

IMG 20240118 201813

ಪ್ರಮುಖ ಸುದ್ದಿ

ಫೆ.12 ರಿಂದ ಫೆ.23ರವರೆಗೆ ವಿಧಾನಮಂಡಲ ಅಧಿವೇಶನ; ಕರ್ನಾಟಕ ಸಾಂಸ್ಕೃತಿಕ ನಾಯಕರಾಗಿ ಬಸವಣ್ಣ ಹೆಸರು‌ ಘೋಷಿಸಿದ ಸರ್ಕಾರ…!!

ಬೆಂಗಳೂರು: ಫೆ.12ರಿಂದ ಫೆ.23ರವರೆಗೆ ರಾಜ್ಯ ವಿಧಾನಮಂಡಲದ ಅಧಿವೇಶನ‌ ನಡೆಯುವುದು ಹಾಗೂ ರಾಜ್ಯದ ಸಾಂಸ್ಕೃತಿಕ ನಾಯಕರನ್ನಾಗಿ ಬಸವಣ್ಣ ಅವರ ಹೆಸರು ಘೋಷಿಸಿ ಸರ್ಕಾರ ಮಹತ್ವ ನಿರ್ಧಾರ ಕೈಗೊಂಡಿದೆ.

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯ ವಿವರಗಳನ್ನು ಕಾನೂನು ಸಚಿವ ಎಚ್.ಕೆ.ಪಾಟೀಲ್ ಸುದ್ದಿಗೋಷ್ಠಿಯಲ್ಲಿ ತಳಿಸಿದರು.

ಫೆಬ್ರವರಿ 12 ರಂದು ವಿಧಾನಮಂಡಲ ಜಂಟಿ ಅಧಿವೇಶನ ನಡೆಯಲಿದ್ದು, ಅಂದು ರಾಜ್ಯಪಾಲರು ಉಭಯ ಸದನಗಳ ಸದಸ್ಯರನ್ನು ಉದ್ದೇಶಿ ಭಾಷಣ ಮಾಡಲಿದ್ದಾರೆ.ಫೆ. 16 ರಂದು ಬಜೆಟ್ ಮಂಡನೆ ಆಗಲಿದೆ ಫೆ. 23ರವರೆಗೆ ಉಭಯ ಸದನಗಳ ಅಧಿವೇಶನ ನಡೆಯಲಿದೆ ಎಂದು ತಿಳಿಸಿದರು.

ಅರಣ್ಯ ಸಚಿವ ಈಶ್ವರ ಖಂಡ್ರೆ ಮಾತನಾಡಿ, ಜಾತಿ ರಹಿತ ಸಮಾಜದ ಕನಸು‌ ಕಂಡವರು ಬಸವಣ್ಣ. ಸಮಾಜದಲ್ಲಿ ಸಾಮರಸ್ಯ ತರುವ ನಿಟ್ಟಿನಲ್ಲಿ ಅವರ ತತ್ವಗಳು ಹೆಚ್ಚು ಪ್ರಸಾರ ಆಗಬೇಕು. ಅವರನ್ನು ಸಾಂಸ್ಕೃತಿಕ ನಾಯಕ ಎಂದು‌ ಘೋಷಣೆ ಮಾಡಬೇಕು ‌ಎಂಬ ಬೇಡಿಕೆ ಇತ್ತು. ಈ ನಿಟ್ಟಿನಲ್ಲಿ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಇಂದಿನ ಕಲುಷಿತ ವಾತಾವರಣದಲ್ಲಿ ಬಸವಣ್ಣ ತತ್ವ ಆದರ್ಶ ಎಲ್ಲಡೆ ಪಸರಿಸಬೇಕು. ಇದಕ್ಕೆ ಸರ್ಕಾರ ಎಲ್ಲಾ ರೀತಿಯ ಪ್ರೋತ್ಸಾಹ ನೀಡುತ್ತದೆ ಎಂದರು.

ಅದಕ್ಕಾಗಿ ಮುಖ್ಯಮಂತ್ರಿ ಹಾಗೂ ಸಂಪುಟದ ಸಚಿವರನ್ನು ಅಭಿನಂದಿಸುವುದಾಗಿ ಹೇಳಿದ ಅವರು, 2025 ರಲ್ಲಿ ಅನುಭವ ಮಂಟಪ ಪೂರ್ಣಗೊಳ್ಳಬೇಕು. ಮುಂದಿನ ವರ್ಷ ಅನುಭವ ಮಂಟಪದ ಲೋಕಾರ್ಪಣೆ ಆಗಲಿದೆ‌ ಎಂದು‌ ತಿಳಿಸಿದರು‌.

  • ಸಂಪುಟ ಸಭೆಯ ಇತರೆ ತೀರ್ಮಾನ
  • ಚಿಕ್ಕಮಗಳೂರಿನ ಬಾಬಾ ಬುಡನಗಿರಿಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಸಲ್ಲಿಸುವ ಆಕ್ಷೇಪಣಾ ಹೇಳಿಕೆ ತಯಾರಿಸಲು ಗೃಹ, ಕಾನೂನು, ಕಂದಾಯ ಸಚಿವರನ್ನು ಒಳಗೊಂಡ ಸಂಪುಟ ಉಪ ಸಮಿತಿ ರಚನೆ
  • ಶಿವಮೊಗ್ಗದ ಹಳೇ ಜೈಲು ಆವರಣದ ಉದ್ಯಾನವನಕ್ಕೆ ಅಲ್ಲಮಪ್ರಭು ಹೆಸರು ಎಂದು ನಾಮಕರಣಕ್ಕೆ ನಿರ್ಧಾರ
  • ಬೆಳಗಾವಿಯ ಕಿತ್ತೂರು ತಾಲೂಕಿನ ಹೆಸರನ್ನು ಚನ್ನಮ್ಮನ ಕಿತ್ತೂರು ಎಂದು ನಾಮಕರಣಕ್ಕೆ ನಿರ್ಣಯ
  • ಕರ್ನಾಟಕ ವಿದ್ಯುತ್ ನಿಗಮದ 4,430 ಕೋಟಿ ರೂ. ಸಾಲಕ್ಕೆ ಸರ್ಕಾರಿ ಖಾತರಿ
  • ಗೃಹ ಜ್ಯೋತಿ ಯೋಜನೆ ಅನುಷ್ಠಾನ ಆದೇಶ ಮಾರ್ಪಡಿಸಿ ಶೇ.10 ಬದಲು ಹೆಚ್ಚುವರಿ 10 ಯೂನಿಟ್ ಒದಗಿಸಲು ಸಂಪುಟ ಒಪ್ಪಿಗೆ
  • ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಲ್ಲಿ ಸಮಗ್ರ ವಿವಿ ಮತ್ತು ಕಾಲೇಜು ನಿರ್ವಹಣಾ ತಂತ್ರಾಂಶ 15.13 ಕೋಟಿ ರೂ. ವೆಚ್ಚದಲ್ಲಿ ಸಿದ್ಧಪಡಿಸಿ ಅನುಷ್ಠಾನ
  • 30 ಸೀಟರ್ ಕಾಲ್ ಸೆಂಟರ್ ಸ್ಥಾಪನೆ
  • ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮತ್ತು ಕಲ್ಯಾಣ ಸುಂಕ ವಿಧೇಯಕ 2024
  • ಮೈಸೂರು ಜಿಲ್ಲೆಯ ಎಚ್‌ಡಿ ಕೋಟೆ ಅಂತರಸಂತೆಯ ಹಾಗೂ ಇತರ ಜನವಸತಿಗಳಿಗೆ ಜಲಜೀವನ ಮಿಷನ್‌ಗೆ 101.73 ಕೋಟಿ ರೂ‌ ಯೋಜನೆಗೆ, ಹಂಪಾಪುರಕ್ಕೆ ಹಾಗೂ 48 ಜನವಸತಿಗಳಿಗೆ 65.07 ಕೋಟಿ ರೂ. ವೆಚ್ಚದ ಕುಡಿಯುವ ನೀರು ಯೋಜನೆ ಅನುಷ್ಠಾನ
  • ಟಿ.ನರಸೀಪುರ ತಾಲೂಕಿನ ದೊಡ್ಡ ಬಾಗಿಲು‌ ಮತ್ತು ಇತರೆ 24 ಜನವಸತಿಗಳಿಗೆ 34 ಕೋಟಿ ರೂ. ವೆಚ್ಚದ ಬಹು ಗ್ರಾಮದ ಕುಡಿಯುವ ನೀರು‌ ಯೋಜನೆಗೆ ಹಾವೇರಿ ತಾಲೂಕಿನ ನೆಗಲೂರು ಮತ್ತು ಇತರೆ ಮೂರು ಗ್ರಾಮಗಳಿಗೆ 18 ಕೋಟಿ ರೂ. ವೆಚ್ಚದ ಜಲಜೀವನ ಮಿಷನ್ ಪುನಶ್ಚೇತನ ಕಾಮಗಾರಿಗೆ ಅನುಮೋದನೆ
  • ಹಾನಗಲ್ ತಾಲೂಕಿನ ಕುಡ್ಡ ಮತ್ತು ಇತರೆ ಗ್ರಾಮಗಳಿಗೆ 26 ಕೋಟಿ ರೂ. ವೆಚ್ಚದ ಜಲಜೀವನ ಮಿಷನ್’ ತಾಲೂಕಿನ 24 ಗ್ರಾಮಗಳಿಗೆ 245 ಕೋಟಿ ರೂ. ವೆಚ್ಚದ ಪುನಶ್ಚೇತನ ಕಾಮಗಾರಿ
  • ಆನೇಕಲ್‌ನ ಅಂಬೇಡ್ಕರ್ ಭವನಕ್ಕೆ ಪರಿಷ್ಕೃತ 17.40 ಕೋಟಿ ರೂ. ವೆಚ್ಚಕ್ಕೆ ಮತ್ತು ಹಲಸೂರು ಕೆರೆಯ ಬಳಿ ಪ್ರವಾಸಿಸೌಧ ನಿರ್ಮಾಣಕ್ಕೆ 18 ಕೋಟಿ
  • ರಾಜ್ಯದಲ್ಲಿ ನೋಂದಾಯಿತ ವಾಹನಗಳ ಸ್ಕ್ರಾಪಿಂಗ್ ನೀತಿಯ ಕ್ರಮ ಸಂಖ್ಯೆ 9ನ್ನು ಪರಿಷ್ಕರಣೆಗೆ ಅನುಮೋದನೆ
  • ಕೊಡಗು ಜಿಲ್ಲೆಯ ಪೊನ್ನಂಪೇಟೆ ಗ್ರಾಪಂನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೇಗೇರಿಸುವುದಕ್ಕೆ ನಿರ್ಧಾರ ಮಾಡಲಾಯಿತು

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top