Connect with us

Dvgsuddi Kannada | online news portal | Kannada news online

ಯಾವ ಕೇಸ್ ದಾಖಲಿಸಿದರೂ ಎದುರಿಸಲು ಸಿದ್ಧ: ರಮೇಶ್ ಜಾರಕಿಹೊಳಿ

ಪ್ರಮುಖ ಸುದ್ದಿ

ಯಾವ ಕೇಸ್ ದಾಖಲಿಸಿದರೂ ಎದುರಿಸಲು ಸಿದ್ಧ: ರಮೇಶ್ ಜಾರಕಿಹೊಳಿ

ಬೆಂಗಳೂರು: ಸಿಡಿ ಪ್ರಕರಣ ಕ್ಷಣ ಕ್ಷಣಕ್ಕೂ ಮಹತ್ವ ಪಡೆದುಕೊಳ್ಳುತ್ತಿದ್ದು, ಯುವತಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲಿಸಲು ಮುಂದಾಗಿದ್ದಾಳೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ರಮೇಶ್ ಜಾರಕಿಹೊಳಿ, ಯುವತಿ ಯಾವ ಕೇಸ್ ಬೇಕಾದರೂ ದಾಖಲಿಸಿದ್ರೂ ಎದುರಿಸಲು ಎಲ್ಲದಕ್ಕೂ ರೆಡಿ ಇದ್ದೇನೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುವತಿ ದೂರು ದಾಖಲಿಸಲಿ. ಆಕೆ ನನ್ನ ವಿರುದ್ಧ ರೇಪ್ ಕೇಸ್ ದಾಖಲಿಸಿದರು ಕೂಡ ನಾನು ಕಾನೂನು ಪ್ರಕಾರ ಹೋರಾಡಲು ಮಾನಸಿಕವಾಗಿ ಸಿದ್ಧನಾಗಿದ್ದೇನೆ. ವಕೀಲರನ್ನು ಭೇಟಿಯಾಗಿ ಚರ್ಚಿಸಿ ಮುಂದಿನ ನಿರ್ಧಾರ ಮಾಡುತ್ತೇನೆ ಎಂದಿದ್ದಾರೆ.

ಯುವತಿ ಸಂತ್ರಸ್ತೆ ಆಗಿದ್ದರೆ,  ಆವತ್ತೇ ಹೊರಗೆ ಬಂದು ದೂರು ದಾಖಲಿಸಬೇಕಿತ್ತು. ಈಗ ವಕೀಲರ ಮೂಲಕ ದೂರು ದಾಖಲಿಸುತ್ತಿದ್ದಾಳೆ. ಇದೆಲ್ಲವೂ ಒಂದು ಷಡ್ಯಂತ್ರ. ಇನ್ನು ಮುಂದೆ ಏನು ಆಗುತ್ತೆ ನೋಡ್ತಾ ಇರೀ.  ನಾನು ಯಾವುದೇ ಜಾಮೀನು ಪಡೆಯಲ್ಲ. ವಕೀಲ ಸಲಹೆ ಪಡೆದು ಮುಂದುವರೆಯುತ್ತೇನೆ ಎಂದರು.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top