ರೈತರ ಜಮೀನಿನ ರಸ್ತೆ ಅಭಿವೃದ್ಧಿಗೆ ಕೃಷಿ ಪಥ ಯೋಜನೆ ಘೋಷಣೆ; ಮಣ್ಣಿನ ಸಂರಕ್ಷಣೆಗೆ ಕೃಷಿ ಕವಚ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ರಾಜ್ಯ ಬಜೆಟ್-2025-26 ( Karnataka Budget) ಮಂಡಿಸುತ್ತಿದ್ದು, ಇಲಾಖೆವಾರು ಅನುದಾನ ಹಂಚಿಕೆ ಮಾಡಿದ್ದಾರೆ. ರೈತರ ಜಮೀನುಗಳಿಗೆ ಇರುವ ದಾರಿಗಳ ಅಭಿವೃದ್ಧಿಗೆ ಸಿಎಂ,  ಹೊಸ ಯೋಜನೆ ಘೋಷಣೆ ಮಾಡಿದ್ದಾರೆ. ರೈತರ ಹೊಲಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲು ಕೃಷಿ ಪಥ ಯೋಜನ ಜಾರಿಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

4 ಲಕ್ಷ ಕೋಟಿ ದಾಟಿದ ರಾಜ್ಯ ಬಜೆಟ್; ಯಾವ ಇಲಾಖೆಗೆ ಎಷ್ಟು ಅನುದಾನ..?

ಗ್ರಾಮೀಣ ಪ್ರದೇಶಗಳಲ್ಲಿ ಹಾದುಹೋಗುವ ರಾಜ್ಯ ಮತ್ತು ಜಿಲ್ಲಾ ರಸ್ತೆಗಳ 5,000 ಕಿ.ಮೀ. ಬದಿಗಳಲ್ಲಿ ಸಸಿಗಳನ್ನು ಬೆಳೆಸಿ ‘ಹಸಿರು ಪಥ ‘ಗಳನ್ನು ನಿರ್ಮಾಣ ಮಾಡಲಾಗುವುದು. ರೈತರ ಜಮೀನುಗಳಲ್ಲಿ ಅಂತರ್ಜಲ ಹೆಚ್ಚಳ ಹಾಗೂ ಮಣ್ಣಿನ ಸಂರಕ್ಷಣೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ‘ಕೃಷಿ ಕವಚ’ ಕಾರ್ಯಕ್ರಮ ರೂಪಿಸಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಒಟ್ಟು 50,000 ಹೆಕ್ಟೇರ್ ಬದು ನಿರ್ಮಾಣ ಮಾಡಲಾಗುವುದು.

ಮುಸ್ಲಿಂ ಸಮುದಾಯಕ್ಕೆ ಬಂಪರ್ ಕೊಡುಗೆ; ಹಲಾಲ್ ಬಜೆಟ್ ಎಂದು ಬಿಜೆಪಿ ಕಿಡಿ

ತ್ಯಾಜ್ಯ ನೀರನ್ನು ನಿರ್ವಹಣೆ ಮಾಡಲು 500 ಗ್ರಾಮಗಳಲ್ಲಿ ಬೂದು ನೀರು ನಿರ್ವಹಣಾ ನಿರ್ಮಿಸಲಾಗುವುದು.ಗ್ರಾಮೀಣ ಪ್ರದೇಶದ ಸ್ವ-ಸಹಾಯ ಪಾಲ್ಗೊಳ್ಳುವಿಕೆಯೊಂದಿಗೆ ಮಿಶ್ರ ಬೆಳೆ ಪದ್ಧತಿಯಲ್ಲಿ ಸಂಬಾರ ಪದಾರ್ಥಗಳು ಹಾಗೂ ಹಣ್ಣಿನ ಬೆಳೆಗಳನ್ನು ಒಟ್ಟು 5,000 ಎಕರೆ ಪ್ರದೇಶದಲ್ಲಿ ಬೆಳೆಸಲಾಗುವುದು ಎಂದಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *