ಚಿಕ್ಕಮಗಳೂರು: ಮದುವೆ ಕೇವಲ ಒಂದು ದಿನ ಬಾಕಿ ಇರುವಾಗ ಹೃದಯವಿದ್ರಾವಕ ಘಟನೆಯೊಂದು ಅಜ್ಜಂಪುರ ತಾಲ್ಲೂಕಿನಲ್ಲಿ ನಡೆದಿದೆ. ಮದುವೆಗೆ ಕೇವಲ ಒಂದು ದಿನ ಬಾಕಿ ಇರುವಾಗ ಸೊಲ್ಲಾಪುರ ಗ್ರಾಮದ 24 ವರ್ಷದ ಶೃತಿ ಅಕಸ್ಮಿಕವಾಗಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ನಾಳೆ ನಡೆಯಬೇಕಿದ್ದ ಮದುವೆ
ಶೃತಿ ಅವರ ಮದುವೆ ತರೀಕೆರೆ ಪಟ್ಟಣದ ದಿಲೀಪ್ ಎಂಬ ಯುವಕನೊಂದಿಗೆ ನಾಳೆ (ಶುಕ್ರವಾರ) ನಡೆಯಬೇಕಿತ್ತು. ಮದುವೆ ಸಿದ್ಧತೆ ನಡೆಯುತ್ತಿದ್ದಾಗಲೇ ಈ ದುರ್ಘಟನೆ ನಡೆದಿದ್ದು, ಮದುವೆ ಸಂಭ್ರಮವಿರಬೇಕಾದ ಮನೆಯಲ್ಲಿ ಶೋಕದ ವಾತಾವರಣ ಆವರಿಸಿದೆ. .
ವಿಧಿಯಾಟಕ್ಕೆ ಯುವತಿ ಬಲಿ
ಘಟನೆಯ ಕುರಿತು ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಗ್ರಾಮಸ್ಥರು ಹಾಗೂ ಬಂಧುಬಳಗದವರು ಈ ದುರ್ಘಟನೆಯನ್ನು ನಂಬಲಾಗದೆ ನೋವು ವ್ಯಕ್ತಪಡಿಸುತ್ತಿದ್ದು, ಮದುವೆ ದಿನಕ್ಕೂ ಮುನ್ನವೇ ಇಂತಹ ದುರಂತ ಸಂಭವಿಸಿರುವುದು ವಿಧಿಯಾಟ ಎಂದು ಸಂಬಂಧಿಕರು ಕಣ್ಣೀರಿಟ್ಟಿದ್ದಾರೆ.



