Connect with us

Dvgsuddi Kannada | online news portal | Kannada news online

ಟೋಲ್ ಗೇಟ್ ಬಳಿ ನಿಂತಿದ್ದ ಗ್ಯಾಸ್ ಟ್ಯಾಂಕರ್ ಗೆ ಕಾರು ಡಿಕ್ಕಿ; ಸ್ಥಳದಲ್ಲಿಯೇ ಮೂವರ ಸಾವು

ಪ್ರಮುಖ ಸುದ್ದಿ

ಟೋಲ್ ಗೇಟ್ ಬಳಿ ನಿಂತಿದ್ದ ಗ್ಯಾಸ್ ಟ್ಯಾಂಕರ್ ಗೆ ಕಾರು ಡಿಕ್ಕಿ; ಸ್ಥಳದಲ್ಲಿಯೇ ಮೂವರ ಸಾವು

ಚಿತ್ರದುರ್ಗ: ಟೋಲ್ ಗೇಟ್​ನಲ್ಲಿ ನಿಂತಿದ್ದ ಗ್ಯಾಸ್​ ಟ್ಯಾಂಕರ್​ ಕಾರು ಡಿಕ್ಕಿ, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಜಿಲ್ಲೆಯ ಘಟನೆ ಹಿರಿಯೂರು ತಾಲೂಕಿನ ಗುಯಿಲಾಳುನಲ್ಲಿ ಸಂಭವಿಸಿದೆ.

ಇಂದು ಬೆಳಗ್ಗೆ ಗುಯಿಲಾಳು ಟೋಲ್​ ಗೇಟ್​ನಲ್ಲಿ ಗ್ಯಾಸ್​ ಟ್ಯಾಂಕರ್​ ನಿಂತಿತ್ತು.ವೇಗವಾಗಿ ಬಂದ ಕಾರು ಹಿಂಬದಿಯಿಂದ ಟ್ಯಾಂಕರ್​ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ಸ್ಥಳೀಯ ಶವಾಗಾರಕ್ಕೆ ರವಾನಿಸಲಾಗಿದೆ. ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top