ಭಾರತೀಯ ಸೇನೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ದಾವಣಗೆರೆ, ಚಿತ್ರದುರ್ಗದ ಯುವಕರಿಗೆ ವಂಚನೆ; ಹುಬ್ಬಳ್ಳಿ ಮೂಲದ ಆರೋಪಿ‌ ಬಂಧನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಚಿತ್ರದುರ್ಗ: ಭಾರತೀಯ ಸಶಸ್ತ್ರ ಪಡೆಗಳಲ್ಲಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದಾವಣಗೆರೆ, ಚಿತ್ರದುರ್ಗದ‌ 150‌ ಯುವಕರಿಗೆ‌‌ 1 ಕೋಟಿ ರೂ. ವಂಚಿಸಿದ್ದ ಆರೋಪಿಯನ್ನು ಬಂಧಿಸಲಾಗಿದೆ.

ಹುಬ್ಬಳ್ಳಿ ಮೂಲದ ಶಿವರಾಜ್ ವಟಗಲ್ (40) ಬಂಧಿತ ಆರೋಪಿ. ಶಿವರಾಜ್ ವಟಗಲ್ ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸಿದ್ದೇನೆ ಎಂದು ಹೇಳಿ ಯುವಕರನ್ನು ನಂಬಿಸಸಿ ವಂಚನೆ ಮಾಡುತ್ತಿದ್ದನು.ಯುವಕರನ್ನು ನಂಬಿಸಲು ನಕಲಿ ದಾಖಲೆ ಸೃಷ್ಟಿಸಿತ್ತಿದ್ದನು. ಭಾರತೀಯ ಸೇನೆ, ವಾಯುಸೇನೆ ಮತ್ತು ನೌಕಾಪಡೆಯಲ್ಲಿ ಉದ್ಯೋಗ ಕೊಡಿಸುವುದಾಗಿ 150 ಯುವಕರಿಗೆ 1 ಕೋಟಿ ರೂ. ವಂಚಿಸಿದ್ದನು. ವಂಚನೆಗೆ ಒಳಗಾದ ಪ್ರಕಾಶ್ (31) ಎಂಬುವರು ಚಿತ್ರದುರ್ಗದ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪೊಲೀಸರು ಮತ್ತು ಮಿಲಿಟರಿ ಗುಪ್ತಚರ ಜಂಟಿಯಾಗಿ ಕಾರ್ಯಾಚರಣೆಗೆ ಇಳಿದಿತ್ತು. ಅಕ್ಟೋಬರ್ 20 ರಂದು ಮಿಲಿಟರಿ ಗುಪ್ತಚರ, ಬೆಂಗಳೂರು ಮತ್ತು ಚಿತ್ರದುರ್ಗ ಜಿಲ್ಲೆಯ ಶ್ರೀರಾಂಪುರ ಪೊಲೀಸ್ ತಂಡವು ಜಂಟಿ ಕಾರ್ಯಾಚರಣೆ ನಡೆಸಿ ಚಿತ್ರದುರ್ಗದಲ್ಲಿ ವಂಚಕ ಶಿವರಾಜ್​ ಮತ್ತು ಆತನ ಸಂಗಾತಿ ಭೀಮವ್ವರನ್ನು ಬಂಧಿಸಿದ್ದಾರೆ. ದಾವಣಗೆರೆ, ಚಿತ್ರದುರ್ಗ ಸೇರಿ ಉತ್ತರ ಕರ್ನಾಟಕದ ಹಲವು ಜಿಲ್ಲೆಯಲ್ಲಿ ವಂಚನೆ ನಡೆಸಿದ್ದಾರೆ.

ಈ ಬಗ್ಗೆ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ವಂಚಕ ಶಿವರಾಜ್ ನಕಲಿ ನಕಲಿ ಗುರುತಿನ ಚೀಟಿಗಳು ಮತ್ತು ಸೇನಾ ನೇಮಕಾತಿ ಸಂಬಂಧಿತ ದಾಖಲೆಗಳನ್ನು ವಶಪಡೆಯಲಾಗಿದೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *