ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ತೀವ್ರ ಕೊರತೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಬರ ಘೋಷಣೆ ಸಂಬಂಧ ಇರುವ ನಿಯಮಾವಳಿಗಳನ್ನು ಸಡಿಲಿಕೆ ಮಾಡುವಂತೆ ಕೋರಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ತಡವಾಗಿ ಆಗಮಿಸಿದ್ದು, ಮುಂಗಾರು ಮಳೆಯ ಕೊರತೆಯುಂಟಾಗಿದೆ. ಕೇಂದ್ರ ಸರ್ಕಾರ ನಿಯಮಗಳು ರಾಜ್ಯದಲ್ಲಿ ಬಲಗಾಲ ಘೋಷಣೆಗೆ ಅಡ್ಡಿ ಆಗುತ್ತೇವೆ. ಕೇಂದ್ರ ಸರ್ಕಾರ ನಿಯಮ ಪ್ರಕಾರ ಶೇ. 50 ರಷ್ಟು ಮಳೆ ಕೊರತೆ, ಶೇ.60 ರಷ್ಟು ಬೆಳೆ ಹಾನಿ ಆಗಿದ್ದರೆ ಮಾತ್ರ ಬರಗಾಲ ಎಂದು ಘೋಷಿಸುವ ನಿಯಮವಿದೆ. ಈ ನಿಯಮ ಬದಲಿಸುತೆ ಕೇಂದ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.
ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಈವರೆಗೆ ಶೇ. 12 ರಷ್ಟು ಮಳೆ ಕೊರತೆಯಾಗಿದೆ. ಕಳೆದ 10 ದಿನಗಳಲ್ಲಿ ಶೇ. 63 ರಷ್ಟು ಮಳೆ ಅಭಾವ ಸೃಷ್ಟಿಯಾಗಿದ್ದು, ತಡವಾಗಿ ಬಿತ್ತನೆ ಕಾರ್ಯ ನಡೆಸಿದ ರೈತರು ಕಂಗಾಲಾಗಿದ್ದಾರೆ. ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಬರಗಾಲ ಘೋಷಣೆಗೆ ಕೇಂದ್ರ ಸರ್ಕಾರದ ಷರತ್ತುಗಳ ಅಡ್ಡಿಯಾಗಿದ್ದು, ಬರಗಾಲ ಘೋಷಣೆ ಸಂಬಂಧ ಇರುವ ನಿಯಮಾವಳಿಗಳನ್ನು ಸಡಿಲಿಕೆ ಮಾಡುವಂತೆ ಕೋರಿ ಸಿಎಂ ಕಚೇರಿಯಿಂದ ಕೇಂದ್ರದ ಕೃಷಿ ಸಚಿವಾಲಯಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ ಎಂದು ಹೇಳಲಾಗುತ್ತಿದೆ.



