ಕೊರೊನಾ ಎರಡನೇ ಅಲೆ: ದಾವಣಗೆರೆ ಸೇರಿದಂತೆ ಆರು ಜಿಲ್ಲೆಗಳಿಗೆ ಎಚ್ಚರಿಕೆ..!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ಎರನಡೇ ಅಲೆ ಸೋಂಕು ಹೆಚ್ಚಳವಾಗುತ್ತಿದೆ. ರಾಜ್ಯದ ದಾವಣಗೆರೆ ಸೇರಿದಂತೆ 6 ಜಿಲ್ಲೆಗಳಲ್ಲಿ ಪಾಸಿಟಿವ್ ಕೇಸ್‌ಗಳ ಸಂಖ್ಯೆ ಹೆಚ್ಚುತ್ತಿದೆ ಇದೆ.

ಈ ಹಿನ್ನೆಲೆಯಲ್ಲಿ ದಾವಣಗೆರೆ, ಬಳ್ಳಾರಿ, ಮೈಸೂರು, ಬೆಳಗಾವಿ, ದಕ್ಷಿಣ ಕನ್ನಡ, ಬೆಂಗಳೂರು ಈ 6 ಜಿಲ್ಲೆಗಳ ಮೇಲೆ ರಾಜ್ಯ ಸರ್ಕಾರ ನಿಗಾ ವಹಿಸಿದ್ದು, ಆರ್ ಟಿ ಪಿಸಿಆರ್ ಪರೀಕ್ಷೆ ಹೆಚ್ಚಿಸಲು ಸೂಚನೆ ನಿಡಿದೆ.

ಬೆಂಗಳೂರು ಗ್ರಾಮಾಂತರದಲ್ಲಿ ರ್ಯಾಪಿಡ್ ಆಂಟಿಜನ್ ಪರೀಕ್ಷೆ ತಗ್ಗಿಸಿ, ಆರ್ಟಿಪಿಸಿಆರ್ ಪರೀಕ್ಷೆ ಹೆಚ್ಚಳಕ್ಕೆ ಸೂಚಿಸಲಾಗಿದೆ. ಇನ್ನು ಈ 6 ಜಿಲ್ಲೆಗಳಲ್ಲಿ 1:20 ಅನುಪಾತದಲ್ಲಿ ಸಂಪರ್ಕಿತರ ಪತ್ತೆಗೆ ಆರೋಗ್ಯ ಇಲಾಖೆ ಟಾರ್ಗೆಟ್ ಫಿಕ್ಸ್ ಮಾಡಿದೆ.ಒಬ್ಬ ಸೋಂಕಿತ ಪತ್ತೆಯಾದರೆ 20 ಸಂಪರ್ಕಿತರ ಪತ್ತೆ ಹಚ್ಚಿ ಪರೀಕ್ಷಿಸುವುದು ಕಡ್ಡಾಯ ಎಂದು ಆರೋಗ್ಯ ಇಲಾಖೆ ಕಾರ್ಯದರ್ಶಿ ಜಾವೆದ್ ಅಖ್ತರ್ ಅವರು ಆದೇಶ ಹೊರಡಿಸಿದ್ದಾರೆ.

ಪರೀಕ್ಷೆ ಹೆಚ್ಚಿಸಲು ಟಾರ್ಗೆಟ್ ಪರಿಷ್ಕರಣೆ
ಕೊರೋನಾ ಸೋಂಕು ಹೆಚ್ಚಿರುವ ಜಿಲ್ಲೆಗಳಲ್ಲಿ ಪ್ರತಿ ನಿತ್ಯದ ಪರೀಕ್ಷೆ ಟಾರ್ಗೆಟ್ ಹೆಚ್ಚಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದು, ಎಲ್ಲಾ ಜಿಲ್ಲೆಗಳು ಪರೀಕ್ಷಾ ಟಾರ್ಗೆಟ್ ತಲುಪುಲು ಕ್ರಮ ಕೈಗೊಳ್ಳಲು ಸರ್ಕಾರ ಆದೇಶ ಮಾಡಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *