ಬೆಂಗಳೂರು: ಕೊರೊನಾ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ. ಕೋವಿಡ್ ನಿಯಂತ್ರಣ ಬರುವವರೆಗೂ ಮಾರ್ಗಸೂಚಿಯಲ್ಲಿ ಬದಲಾವಣೆ ಇಲ್ಲ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಏಕಾಏಕಿ ಇಂತಹ ಮಾರ್ಗಸೂಚಿ ತಂದಿಲ್ಲ. ತಾಂತ್ರಿಕ ಸಲಹಾ ಸಮಿತಿ ವರದಿ ಆಧಾರಿಸಿ ಕ್ರಮಕೈಗೊಳ್ಳಲಾಗಿದೆ. ಸರ್ಕಾರಕ್ಕೆ ಯಾವ ಚಟುವಟಿಕೆಯನ್ನು ನಿರ್ಬಂಧಿಸುವ ಉದ್ದೇಶವಿಲ್ಲ. ಏ.೨೦ ವರೆಗೆ ಈ ಮಾರ್ಗಸೂಚಿ ಜಾರಿಯಲ್ಲಿ ಇರಲಿದೆ ಎಂದರು.
ಎರಡನೇ ಅಲೆ ಹಿನ್ನೆಲೆ ಕೋವಿಡ್ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕಾದುದು ಅನಿವಾರ್ಯ ಮತ್ತು ಅವಶ್ಯಕ. ೀ ದಾರಿ ಬಿಟ್ಟು ನಮಗೆ ಬೇರೆ ದಾರಿ ಇಲ್ಲ. 45 ವರ್ಷ ಮೇಲ್ಪಟ್ಟವರು ದಯವಿಟ್ಟು ಲಸಿಕೆ ಪಡೆಯಬೇಕು. ಗುಂಪು ಸೇರುವುದನ್ನು ಕಡಿಮೆ ಮಾಡಿ ಮಾಸ್ಕ್ ಬಳಸಬೇಕು. ಶಾಲೆ, ಜಿಮ್, ಸ್ವಿಮ್ಮಿಂಗ್ ಪೂಲ್, ಮದುವೆ, ಅಪಾರ್ಟ್ಮೆಂಟ್ ಎಲ್ಲವೂ ತೆಗೆದರೆ ಹೇಗೆ? ಗಂಭೀರವಾದ ಕ್ರಮ ಕೈಗೊಂಡಿಲ್ಲ ಎಂದು ವರದಿಗಳು ಬರುತ್ತಿತ್ತು. ಈಗ ಕ್ರಮ ಕೈಗೊಳ್ಳಬೇಕಾಗಿರುವುದು ಅನಿವಾರ್ಯ ಎಂದು ಹೇಳಿದರು.
ಚುನಾವಣೆಗೂ ಮಾರ್ಗಸೂಚಿ ಅನ್ವಯವಾಗಲಿದೆ. ಚುನಾವಣಾ ಆಯೋಗದಿಂದ ಮಾರ್ಗಸೂಚಿ ನೀಡಲಾಗಿದೆ. ಧಾರ್ಮಿಕ ಕ್ಷೇತ್ರಗಳಲ್ಲೂ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಇದರಲ್ಲಿ ರಾಜಕೀಯ ಬೆರೆಸುವ ಅವಶ್ಯಕತೆಯಿಲ್ಲ.ಬಸ್ ಗಳಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಪ್ರಯಾಣಿಕರನ್ನ ಕರೆದೊಯ್ಯವಂತಿಲ್ಲ. ನೈಟ್ ಕರ್ಫ್ಯೂ, ವಾರಾಂತ್ಯದ ಲಾಕ್ ಡೌನ್ ಬಗ್ಗೆ ಗೊತ್ತಿಲ್ಲ. ಸೋಂಕು ನಿಯಂತ್ರಣಕ್ಕೆ ಬಂದರೆ ಮತ್ತೆ ಎಲ್ಲದಕ್ಕೂ ಅವಕಾಶ ಮಾಡಿಕೊಡಲಾಗುವುದು ಎಂದರು.



