ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿದೆ. ರಾಜ್ಯದಲ್ಲಿ ಆಕ್ಸಿಜನ್ ಕೊರತೆಯುಂಟಾಗಿದ್ದು, ಈ ಬಗ್ಗೆ ಶೀಘ್ರದಲ್ಲಿ ಸಮಸ್ಯೆ ಸರಿಪಡಿಸಲಾಗುವುದು. ಸೋಂಕಿನ ಲಕ್ಷಣ ಕಂಡು ಬಂದಾಕ್ಷಣ ಆಸ್ಪತ್ರೆಗೆ ಬರಬೇಡಿ. ಮನೆಯಲ್ಲಿಯೇ ಐಸೋಲೇಟ್ ಆಗಿ, ಟೆಲಿಕಾಲಿಂಗ್ ಮೂಲಕ ವೈದ್ಯರನ್ನು ಸಂಪರ್ಕಿಸಿ ಅವರಿಂದ ಔಷಧ ಹಾಗೂ ಮನೆಯಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳುವುದು ಹೇಗೆ ಎಂಬ ಬಗ್ಗೆ ಮಾಹಿತಿ ಪಡೆಯಿರಿ ಎಂದು ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಪಾಸಿಟಿವ್ ಎಂದಾಕ್ಷಣ ಭಯಪಡುವ ಅಗತ್ಯವಿಲ್ಲ. ಇದೊಂದು ಸಾಮಾನ್ಯ ಜ್ವರ, ನೆಗಡಿಯಂತಹ ವೈರಸ್. ಪಾಸಿಟಿವ್ ಎಂದಾಕ್ಷಣ ಭಯಗೊಂಡು ಆಸ್ಪತ್ರೆಗಳಿಗೆ ದಾಖಲಾಗುವ ಅಗತ್ಯವಿಲ್ಲ. ಅನಗತ್ಯವಾಗಿ ಆಸ್ಪತ್ರೆಗೆ ಬರುವುದರಿಂದ ಅಗತ್ಯವಿರುವ ಸೋಂಕಿತರಿಗೂ ಬೆಡ್, ಆಕ್ಸಿಜನ್ ಸಿಗದೆ ಸಾಯುವ ಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಹೇಳಿದರು.
ಭಾರತದಲ್ಲಿ ಈಗ ಕೊರೊನಾ 2ನೇ ಅಲೆ ಮಾತ್ರ ಇದೆ. ಇದು ಇನ್ನೂ 30-40 ದಿನಗಳ ವರೆಗೆ ಇರುತ್ತದೆ. ಆದರೆ ಬೇರೆ ದೇಶಗಳಲ್ಲಿ 3 ಮತ್ತು 4ನೇ ಅಲೆ ಕೂಡ ಆರಂಭವಾಗಿದೆ ಎಂಬ ಆತಂಕಕಾರಿ ಮಾಹಿತಿ ಎಂದರು.



